ಬೆಂಗಳೂರು: ”ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನತೆ ಬದಲಾವಣೆ ಬಯಸಿದ್ದಾರೆ. ನನ್ನನ್ನು ಗೆಲ್ಲಿಸಲು ಕ್ಷೇತ್ರದ ಜನತೆಯ ಹೃದಯ ಮಿಡಿಯುತ್ತಿದೆ” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಹೇಳಿದರು. ಸಭೆ ನಂತರ ಮಾತನಾಡಿದ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್,
”ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಚುನಾವಣಾ ಪ್ರಚಾರ ಪ್ರವಾಸದ ಕಾರ್ಯಕ್ರಮವನ್ನು ನಿಗದಿ ಮಾಡಿದ್ದೇವೆ. ಜೆಡಿಎಸ್ – ಬಿಜೆಪಿ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಎರಡು ದಿನಕ್ಕೆ ಒಂದು ವಿಧಾನಸಭಾ ಕ್ಷೇತ್ರ ಕವರ್ ಮಾಡುವ ಬಗ್ಗೆ ಚರ್ಚೆ ಮಾಡಲಾಯಿತು. ಯಾವುದೇ ಗೊಂದಲ ಇಲ್ಲ, ನಾವೆಲ್ಲ ಒಟ್ಟಾಗಿ ಹೋಗುತ್ತಿದ್ದೇವೆ ” ಎಂದರು.
ತೆರೆಗೆ ಬರಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಸಿನಿಮಾ…! ನಿರ್ದೇಶನ ಮಾಡುತ್ತಿರುವುದು ಯಾರು?
”ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ಬರುತ್ತಿದೆ, ಜನರು ಮೋದಿ ನಾಯಕತ್ವ ಬಯಸಿದ್ದಾರೆ. ಈ ಬಾರಿ ಬದಲಾವಣೆ ನಿರೀಕ್ಷೆ ಇದೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನರ ಹೃದಯ ಡಾ.ಸಿ.ಎನ್.ಮಂಜುನಾಥ್ ಅವರನ್ನ ಗೆಲ್ಲಿಸಲು ಮಿಡಿಯುತ್ತಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.