ಅಜ್ಮೀರ್:- ರಾಮಮಂದಿರ ಉದ್ಘಾಟನೆಗೆ ಬಂದಿದ್ದ ಕಾಂಗ್ರೆಸ್ ನಾಯಕರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಶ್ರೀರಾಮನನ್ನು ದ್ವೇಷಿಸುತ್ತದೆ. ರಾಮ ಮಂದಿರ ನಿರ್ಮಾಣದಿಂದ ಎಲ್ಲರಿಗೂ ಸಂತೋಷವಾಗಿದೆಯೇ, ಇಲ್ಲವೇ ನೀವೇ ಹೇಳಿ. ಆದರೆ ಕಾಂಗ್ರೆಸ್ ಮಾತ್ರ ರಾಮನನ್ನು ಎಷ್ಟು ದ್ವೇಷಿಸುತ್ತದೆ ಎಂದರೆ ಅವರು ಪ್ರಾಣಪ್ರತಿಷ್ಠೆಗೆ ಬರುವವರನ್ನು ವಿರೋಧಿಸುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದ್ದಾರೆ.
ಶ್ರೀರಾಮನಿಲ್ಲದ ಈ ದೇಶವನ್ನು ನೀವು ಊಹಿಸಬಲ್ಲಿರಾ? ನಮ್ಮ ದಿನನಿತ್ಯ ಆರಂಭವಾಗುವುದೇ ರಾಮನಿಂದ. ಕೊನೆಗೊಳ್ಳುವುದು ಕೂಡ ರಾಮನಿಂದ. ಆದರೆ ನಿಮಗೆ (ಕಾಂಗ್ರೆಸ್) ಯಾಕೆ ಆ ರಾಮನ ಮೇಲೆ ಅಷ್ಟು ಕೋಪ? ಇದು ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.
ನಮ್ಮ ಮನೆಯಲ್ಲಿ ರಾಮನಿದ್ದಾನೆ. ಇನ್ನೇನು ಕೆಲ ದಿನಗಳಲ್ಲಿ ರಾಮನವಮಿ ಬರುತ್ತದೆ. ಪ್ರತಿಯೊಬ್ಬರು ಅದ್ಧೂರಿಯಾಗಿ ರಾಮನವಮಿ ಆಚರಿಸುತ್ತಾರೆ. ನೀವು ಎಷ್ಟು ಪ್ರತಿಭಟಿಸುತ್ತೀರಿ ನೋಡೋಣ ಎಂದು ವಾಗ್ದಾಳಿ ಮಾಡಿದ್ದಾರೆ.
ಇನ್ನು ರಾಮ ಮಂದಿರ ನಿರ್ಮಾಣದಿಂದಾಗಿ ಇಡೀ ಅಭಿವೃದ್ಧಿ ಹಿನ್ನಡೆಯಾಗಿದೆ ಎಂದು ಕಾಂಗ್ರೆಸ್ ಆರೋಪ ವಿಚಾರವಾಗಿ ಮಾತನಾಡಿದ ಅವರು, ಬಡವರು, ಹಿಂದುಳಿದವರು ಮತ್ತು ಯುವಕರ ಕಲ್ಯಾಣದ ಬಗ್ಗೆ ಕಾಂಗ್ರೆಸ್ ಎಂದಿಗೂ ಯೋಚಿಸಿಲ್ಲ. 100 ವರ್ಷಗಳ ಭಾರತವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಪ್ರಧಾನಿ ಹುದ್ದೆಯು ನಾಗರಿಕರು ನೀಡಿದ ಉತ್ತಮ ಅವಕಾಶವಾಗಿದೆ ಎಂದು ಹೇಳಿದ್ದಾರೆ.