ಕೊಡಗು:- ಮಡಿಕೇರಿ ಸಮೀಪದ ತಾಳತ್ ಮನೆ ಸಮೀಪ ಹೆದ್ದಾರಿಯಲ್ಲಿಂದು ಮಧ್ಯಾಹ್ನ
ತಾಂತ್ರಿಕ ದೋಷದಿಂದ ಡಸ್ಟರ್ ಕಾರಿನಲ್ಲಿ ಬೆಂಕಿ ಉಂಟಾಗಿ ಹೊತ್ತಿ ಉರಿದಿದೆ.
ಮಂಗಳೂರು ಕಡೆಯಿಂದ ಮಡಿಕೇರಿಯತ್ತ ಬರುತ್ತಿದ್ದ ಡಸ್ಟರ್ ಕಾರಿನ ಇಂಜಿನ್ ನಲ್ಲಿ ತಾಂತ್ರಿಕ ದೋಷವುಂಟಾಗಿ ಬೆಂಕಿ ಆವರಿಸಿಕೊಂಡಿದೆ. ಅಗ್ನಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ದಹಿಸಿದೆ.
ಬೆಂಕಿಯ ಜ್ವಾಲೆ ಪಕ್ಕದ ಕಾಡಿಗೆ ಹಬ್ಬಿದ್ದು, ಮಡಿಕೇರಿ ಅಗ್ನಿ ಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.