ಗದಗ:- 2024 ರ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಬ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.
ವಿಜಯನಗರ: ಬಾಲಕಿಯರ ವಸತಿ ನಿಲಯದಲ್ಲಿ ಭ್ರಷ್ಟಾಚಾರ -ಮಕ್ಕಳ ಧಾನ್ಯಗಳಲ್ಲಿ ಗೋಲ್ಮಾಲ್!
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ, ಹಮ್ಮಿಗಿ, ಶಿಂಗಟಾಲೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು, ಇವರ ಪ್ರಚಾರಕ್ಕೆ ಕಾಂಗ್ರೆಸ್ ಮುಖಂಡರು ಸಾಥ್ ಕೊಟ್ಟಿದ್ದಾರೆ. ನಾನು ನಿಮ್ಮ ಮನೆಯ ಮಗ, ನಿಮ್ಮ ಸಹೋದರ, ನಿಮ್ಮ ತಮ್ಮ. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಜಾರಿ ಮೂಲಕ ಬಡವರ ದೀನ ದಲಿತರ ಹಿತ ಕಾಪಾಡಿದೆ. ಈ ಚುನಾವಣೆಯಲ್ಲಿ ನನಗೆ ಆಶೀರ್ವದಿಸೋ ಮೂಲಕ ಪಾರ್ಲಿಮೆಂಟ್ ಗೆ ಕಳಿಸಿಕೊಡಿ. ಸದಾ ನಿಮ್ಮ ಸೇವೆಯಲ್ಲಿ ನಾನು ಇರ್ತೆನೆ, ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭಿಸ್ತೇನೆ. ನನ್ನನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಆನಂದಸ್ವಾಮಿ ಗಡ್ಡದೇವರಮಠ ಮನವಿ ಮಾಡಿದ್ದಾರೆ.
ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಜಿ ಎಸ್ ಗಡ್ಡದೇವರಮಠ, ಕಾಂಗ್ರೆಸ್ ಮುಖಂಡರಾದ ಶಾಕೀರ್ ಸನದಿ, ಸುಜಾತಾ ಡೊಡ್ಡಮನಿ, ಟಿ ಈಶ್ವರ, ಸೇರಿದಂತೆ ಮುಖಂಡರು ಕಾರ್ಯಕರ್ತರು ಭಾಗಿಯಾಗಿದರು.