ಕೋಲಾರ:– ಕೋಲಾರ ಕಾಂಗ್ರೆಸ್ಗೂ ಬಂಡಾಯದ ಬಿಸಿ ತಟ್ಟಿದೆ. ಕೆಎಚ್ ಮುನಿಯಪ್ಪ(KH Muniyappa) ಅವರ ಅಳಿಯ ಚಿಕ್ಕಪೆದ್ದಣ್ಣರಿಗೆ ಟಿಕೆಟ್ ಕೈತಪ್ಪಿದ್ದಕ್ಕಾಗಿ ಬೇಸರಗೊಂಡಿದ್ದಾರೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೋಲಾರದಲ್ಲಿ ಪ್ರಚಾರ ನಡೆಸಿದರೂ ಕೂಡ ಸಚಿವ ಕೆಎಚ್ ಮುನಿಯಪ್ಪ ಹಾಗೂ ಪುತ್ರಿ ಶಾಸಕಿ ರೂಪಕಲಾ ಆ ಕಡೆ ಮುಖಹಾಕಿಲ್ಲ.
ಈ ಹಿಂದೆ RSS ಬಗ್ಗೆ ತಿಳಿದುಕೊಳ್ಳದೆ ಮಾತಾಡಿದ್ದೇನೆ, ಕ್ಷಮಿಸಿ – ಪ್ರಜ್ವಲ್ ರೇವಣ್ಣ!
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಮೇಶ್ ಕುಮಾರ್ ಬಣ ಮೇಲುಗೈ ಸಾಧಿಸಿದ್ದಕ್ಕೆ ಬೇಸರಗೊಂಡಿದ್ದಾರೆ, ಅದಕ್ಕೂ ಮುನ್ನ ಅಭ್ಯರ್ಥಿ ಕೆವಿ ಗೌತಮ್ ನಾಮಪತ್ರ ಸಲ್ಲಿಸುವ ವೇಳೆ ಸುರ್ಜೇವಾಲಾ ಅವರ ಒತ್ತಾಯಕ್ಕೆ ಮಣಿದು ಒಲ್ಲದ ಮನಸ್ಸಿನಿಂದ ಮುನಿಯಪ್ಪ ಹಾಗೂ ರೂಪಕಲಾ ಬಂದಿದ್ದರು.
ನಾಮಪತ್ರ ಸಲ್ಲಿಸುವ ವೇಳೆಯಲ್ಲೂ ಅಭ್ಯರ್ಥಿ ಜತೆಗೆ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಲಾಗಿತ್ತು. ಕೋಲಾರದಲ್ಲಿ ಅಭ್ಯರ್ಥಿಯ ಸೋಲು-ಗೆಲುವು ನನಗೆ ಸಂಬಂಧಪಟ್ಟಿದ್ದಲ್ಲ ಅದು ಭೈರತಿ ಸುರೇಶ್ ಹಾಗೂ ಶಾಸಕರಿಗೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ