ರಾಂಚಿ:- ಸಾಕ್ಷಿಗೆ ಸಂಗ್ರಹಿಸಿದ್ದ 10 ಕೆಜಿ ಗಾಂಜಾ, 9 ಕೆಜಿ ಭಾಂಗ್ ಇಲಿಗಳೇ ತಿಂದಿದ್ದು, ಕೋರ್ಟ್ಗೆ ವರದಿ ಸಲ್ಲಿಕೆ ಮಾಡಲಾಗಿದೆ. ಅಲ್ಲದೇ ಸಾಕ್ಷಿ ಇಲ್ಲವೆಂದು ಕಕ್ಷಿಗಾರನ ಬಿಡುಗಡೆಗೆ ವಕೀಲರು ಮನವಿ ಮಾಡಿದ್ದಾರೆ.
ವ್ಯಕ್ತಿಯೊಬ್ಬನಿಂದ ಜಪ್ತಿ ಮಾಡಿ ಗೋದಾಮಿನಲ್ಲಿ ಇರಿಸಲಾಗಿದ್ದ ಸುಮಾರು 10 ಕೆಜಿ ಗಾಂಜಾ (Ganja ), 9 ಕೆಜಿ ಭಾಂಗ್ ಅನ್ನು ಇಲಿಗಳೇ ತಿಂದುಬಿಟ್ಟಿವೆ ಎಂದು ಜಾರ್ಖಂಡ್ನ ಧನ್ಬಾದ್ ಪೊಲೀಸರು ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. 2018ರ ಡಿಸೆಂಬರ್ 14 ರಂದು ಇಲ್ಲಿನ ಪೊಲೀಸರು ನಡೆಸಿದ ದಾಳಿಯಲ್ಲಿ ಶಂಭು ಅಗರ್ವಾಲ್ ಆರೋಪಿಯಿಂದ ಗಾಂಜಾ ಮತ್ತು ಭಾಂಗ್ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಅಲ್ಲದೇ ಮಾದಕ ವಸ್ತುಗಳನ್ನು ಹೊಂದಿದ್ದಕ್ಕಾಗಿ ಆರೋಪಿಯನ್ನ ಬಂಧಿಸಲಾಗಿತ್ತು.
MP Election: ಮನೆಯಿಂದಲೇ ಮತದಾನ ಮಾಡುವ ಅರ್ಹತೆ ಹೊಂದಿದ 12 ಲಕ್ಷ ಮಂದಿ!
ಈ ಪ್ರಕರಣದ ವಿಚಾರಣೆ ಸಂದರ್ಭಧಲ್ಲಿ ಪ್ರಿನ್ಸಿಪಾಲ್ ಮತ್ತು ಸೆಷನ್ ನ್ಯಾಯಾಧೀಶರಾದ ರಾಮ್ ಶರ್ಮಾ ಅವರು, ಸಾಕ್ಷ್ಯಗಳನ್ನು ಕೋರ್ಟ್ಗೆ ಸಲ್ಲಿಸುವಂತೆ ತನಿಖಾಧಿಕಾರಿ ಜೈ ಪ್ರಕಾಶ್ ಪ್ರಸಾದ್ ಅವರಿಗೆ ಸೂಚಿಸಿದ್ದರು. ಆದ್ರೆ ನ್ಯಾಯಾಲಯದ ಆದೇಶದ ಹೊರತಾಗಿಯೂ ಪೊಲೀಸರು ಸಾಕ್ಷ್ಯಗಳನ್ನು ಕೋರ್ಟ್ಗೆ ಹಾಜರುಪಡಿಸಲು ಸಾಧ್ಯವಾಗಲಿಲ್ಲ. ಈ ವಸ್ತುಗಳನ್ನು ಇಲಿಗಳು ಸೇವಿಸಿ ನಾಶಪಡಿಸಿವೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದರು. ಏಪ್ರಿಲ್ 6 ರಂದು ವರದಿ ಸಲ್ಲಿಸಿದರು.
ಏತನ್ಮಧ್ಯೆ, ಶಂಭು ಅಗರ್ವಾಲ್ ಪರ ವಕೀಲರು, ತಮ್ಮ ಕಕ್ಷಿದಾರರನ್ನು ತಪ್ಪಾಗಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಕೋರ್ಟ್ಗೆ ಸಾಕ್ಷಿ ಮುಖ್ಯ, ಅದರ ಆಧಾರದ ಮೇಲೆಯೇ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಪೊಲೀಸರು ವಸ್ತುಗಳನ್ನು ಜಪ್ತಿ ಮಾಡಿರುವುದು ನಿಜವೇ ಆದಲ್ಲಿ, ಏಕೆ ಕೋರ್ಟ್ಗೆ ಸಲ್ಲಿಸಲು ಆಗಲಿಲ್ಲ. ನನ್ನ ಕಕ್ಷಿಗಾರರನ್ನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ