ಹಾಸನ :- ಸಚಿವ ಎನ್ ಚಲುವರಾಯಸ್ವಾಮಿ ಅವರು ಜೆಡಿಎಸ್ ವಿರುದ್ಧ ಗುಡುಗಿ ಕಾಂಗ್ರೆಸ್ ಅಭ್ಯರ್ಥಿಪರ ಮತ ಯಾಚನೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ಎರಡೆರಡು ಸಾವಿರ ಅಲ್ಲದೆ ಬೇರೆ ಹಲವಾರು ಸೌಲಭ್ಯಗಳನ್ನು ಒದಗಿಸುತ್ತ್ತಿದ್ದಾರೆ. ಸ್ತ್ರೀಯರು ತಮ್ಮ ಪತಿಗೆ ಹಣ ಕೇಳಿದಾಗ ಒಮ್ಮೆ ಕೊಟ್ಟಾರು ಇಲ್ಲ ಎರಡು ಸಲ, ಆದರೆ ತಮ್ಮ ಸರ್ಕಾರ ಪ್ರತಿ ತಿಂಗಳು ಅವರಿಗೆ ಹಣ ನೀಡುತ್ತಿದೆ ಎಂದರು. ಇನ್ನೆಷ್ಟು ದಿನ ಒಂದೇ ಕುಟುಂಬಕ್ಕೆ ಮಣೆ ಹಾಕುತ್ತೀರಾ? ಶ್ರೇಯಸ್ ಪಟೇಲ್ ಕೂಡ ರಾಜಕೀಯ ಕುಟುಂಬದಿಂದ ಬಂದಿದ್ದಾರೆ, ದುರದೃಷ್ಟವಶಾತ್ ಅಸೆಂಬ್ಲಿ ಚುನಾವಣೆಯಲ್ಲಿ ಅಲ್ಪ ಅಂತರದಿಂದ ಸೋತಿದ್ದಾರೆ, ಆದರೆ ಈ ಬಾರಿ ಹಾಗಾಗಬಾರದು ಎಂದರು.
ಗೌಡರ ಕುಟುಂಬ ಚುನಾವಣೆ ಸಮಯದಲ್ಲಿ ನಿಮಗೆ ಸೌಕರ್ಯಗಳನ್ನು ನೀಡಲು ಮುಂದಾಗುತ್ತದೆ. ಆದರೆ ಆ ಆಮಿಶ ಕೇವಲ ಚುನಾವಣೆ ಮುಗಿಯುವವರೆಗೆ ಮಾತ್ರ, ಆದರೆ ನಮ್ಮ ಸರ್ಕಾರ ನೀಡುತ್ತಿರುವ ನೆರವು ಮುಂದಿನ ನಾಲ್ಕು ವರ್ಷಗಳವರೆಗೆ ಅಡೆತಡೆಯಿಲ್ಲದೆ ಮುಂದುವರಿಯಲಿದೆ ಎಂದು ಚಲುವರಾಯಸ್ವಾಮಿ ಹೇಳಿದರು.