ಬೆಂಗಳೂರು:- RCB ಸೋತಿದ್ದು ಅಪ್ಪು ಪತ್ನಿಯಿಂದ ಎಂಬ ಪೋಸ್ಟ್ ಹಾಕಿದ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ರಿಯಾಕ್ಷನ್ ಪ್ರತಿಕ್ರಿಯೆ ನೀಡಿದ್ದಾರೆ.
CSK vs KKR: ಚೆನ್ನೈನಲ್ಲಿ ಟಾಸ್ ಗೆದ್ದ ಸಿಎಸ್ಕೆ ಬೌಲಿಂಗ್ ಆಯ್ಕೆ, ಕೆಕೆಆರ್ ಬ್ಯಾಟಿಂಗ್!
ಈ ಸಂಬಂಧ ಮಾತನಾಡಿದ ಅವರು,ಅವಹೇಳನಕಾರಿ ಪೋಸ್ಟ್ ಮಾಡಿದವರನ್ನು ಆದಷ್ಟು ಬೇಗ ಸೈಬರ್ ಇಲಾಖೆಯ ಮೂಲಕ ಪತ್ತೆ ಹಚ್ಚಿ, ಕಾನೂನಿನ ಕ್ರಮ ತೆಗೆದುಕೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ನಾನು ಸೂಚನೆ ನೀಡುತ್ತೇನೆ. ಇಂಥ ಕೃತ್ಯ ಮಾಡಿದ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿಗೆ ತರುವ ಕೆಲಸವನ್ನು ಶೀಘ್ರದಲ್ಲೇ ಮಾಡುತ್ತೇನೆ’ ಎಂದು ಜಿ. ಪರಮೇಶ್ವರ್ ಹೇಳಿದ್ದಾರೆ. ಬೇರೆ ನಟರ ಅಭಿಮಾನಿಗಳ ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ತೆರೆದ ಕಿಡಿಗೇಡಿಗಳು ಕೆಟ್ಟ ಪೋಸ್ಟ್ಗಳನ್ನು ಮಾಡಿದ್ದಾರೆ. ಇಂಥ ಕೆಲಸ ಮಾಡಿದವರಿಗೆ ಆದಷ್ಟು ಬೇಗ ತಕ್ಕ ಶಿಕ್ಷೆ ಆಗಬೇಕು ಎಂದು ಡಾ. ರಾಜ್ಕುಮಾರ್ ಕುಟುಂಬದ ಅಭಿಮಾನಿಗಳು ಒತ್ತಾಯಿಸಿದ್ದಾರೆ.