ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದ ಶಿವಣ್ಣ ಅವರು ಮತ್ತೆ ಪ್ರಚಾರಕ್ಕೆ ಇಳಿದಿದ್ದಾರೆ. ನಿರಂತರವಾಗಿ ಅವರು ಚುನಾವಣೆ ಪ್ರಚಾರದಲ್ಲಿ ಇದ್ದ ಕಾರಣ ಅವರಿಗೆ ಸುಸ್ತ್ ಆಗಿತ್ತು. ಹೀಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು
ಒಂದು ದಿನ ಅವರು ಅಲ್ಲಿಯೇ ಇದ್ದು ಚಿಕಿತ್ಸೆ ಪಡೆದು ಬಂದಿದ್ದರು. ಈಗ ಅವರು ಮತ್ತೆ ಚುನಾವಣೆ ಪ್ರಚಾರಕ್ಕೆ ಇಳಿದಿದ್ದಾರೆ. ಶಿವಮೊಗ್ಗದಲ್ಲಿ ಅವರು ಪ್ರಚಾರ ಮಾಡುತ್ತಿದ್ದಾರೆ. ‘ಶಿವರಾಜ್ಕುಮಾರ್ ಆಗಿ ಅಲ್ಲ ಗೀತನ ಗಂಡ ಆಗಿ ಬಂದಿದ್ದೇನೆ’ ಎಂದಿದ್ದಾರೆ ಅವರು. ಇದಕ್ಕೆ ಶಿಳ್ಳೆ ಚಪ್ಪಾಳೆ ಬಿದ್ದಿದೆ.