ಉತ್ತರಾಖಂಡ:- ಇಲ್ಲಿನ ಎಸ್ಟಿಎಫ್ ಮತ್ತು ಹರಿದ್ವಾರ ಪೊಲೀಸರು ಗುರುದ್ವಾರ ಮುಖ್ಯಸ್ಥರ ಹತ್ಯೆ ಪ್ರಕರಣದ ಆರೋಪಿಯನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.
ಮಾರ್ಚ್ 28ರಂದು ದೇಗುಲದ ಆವರಣದಲ್ಲಿ ಬೈಕ್ ನಲ್ಲಿ ಬಂದ ಸರಬ್ಜಿತ್ ಸಿಂಗ್ ಮತ್ತು ಅಮರ್ ಜಿತ್ ಸಿಂಗ್ ಬಾಬಾ ತಾರ್ಸೆಮ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ನಾನಕಮಟ್ಟಾ ಸಾಹಿಬ್ ಗುರುದ್ವಾರದ ಡೇರಾ ಕರ್ ಸೇವಾ ಮುಖ್ಯಸ್ಥ ಕುರ್ಚಿಯಲ್ಲಿ ಕುಳಿತಿದ್ದಾಗ ಶೂಟರ್ ರೈಫಲ್ನಿಂದ ಗುಂಡು ಹಾರಿಸಿದ್ದ.
ಅಮರ್ಜಿತ್ ಸಿಂಗ್ ಅವರ ಸಾವಿನ ಕುರಿತು ಉತ್ತರಾಖಂಡ ಡಿಜಿಪಿ ಅಭಿನವ್ ಕುಮಾರ್ ಎಎನ್ಐಗೆ ಹೇಳಿಕೆ ನೀಡಿದ್ದು, ಅವರ ಸಹಚರರು ಪರಾರಿಯಾಗಿದ್ದಾರೆ ಮತ್ತು ಅಧಿಕಾರಿಗಳು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದಿದ್ದಾರೆ.
ಉತ್ತರಾಖಂಡದ ಪೊಲೀಸರು ಬಾಬಾ ಹತ್ಯೆಯನ್ನು ಸವಾಲಾಗಿ ತೆಗೆದುಕೊಂಡಿದ್ದು, ಎಸ್ಟಿಎಫ್ ಮತ್ತು ಪೊಲೀಸರು ಇಬ್ಬರೂ ಹಂತಕರಿಗಾಗಿ ನಿರಂತರವಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದಿದ್ದಾರೆ.
ಹರಿದ್ವಾರದ ಕಲಿಯಾರ್ ರಸ್ತೆ ಮತ್ತು ಭಗವಾನ್ಪುರ ನಡುವೆ ಎನ್ಕೌಂಟರ್ ನಡೆದಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪರ್ಮಿಂದರ್ ದೋವಲ್ ಹೇಳಿದ್ದಾರೆ. ಅಮರ್ಜಿತ್ ಸಿಂಗ್ ವಿರುದ್ಧ 16ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.