ಲಕ್ನೋ:- ಲೋಕಸಭಾ ಚುನಾವಣೆಯ ಬಿಸಿ ಹೊತ್ತಲ್ಲೇ ಉತ್ತರಪ್ರದೇಶದ ಅಲಿಗಢ್ನಲ್ಲಿ ಅಭ್ಯರ್ಥಿಯೊಬ್ಬರು ಅಚ್ಚರಿ ಮೂಡಿಸುವ ಕೆಲಸ ಮಾಡಿದ್ದಾರೆ.
ಯಾರನ್ನಾದರೂ ಶಿಕ್ಷಿಸಲು ಅಥವಾ ಅವಮಾನಿಸಲು ಚಪ್ಪಲಿ ಹಾರವನ್ನು ಧರಿಸುವುದನ್ನು ನೀವು ಆಗಾಗ್ಗೆ ನೋಡಿರಬಹುದು. ಆದರೆ ಅಲಿಗಢದ ಸ್ವತಂತ್ರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಗೌತಮ್ ಚಪ್ಪಲಿ ಹಾರ ಹಾಕಿಕೊಂಡು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಹೂವಿನ ಹಾರದ ಬದಲು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸಿದ್ದನ್ನು ಕಂಡು ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಗುರುದ್ವಾರ ಮುಖ್ಯಸ್ಥರ ಹತ್ಯೆ ಕೇಸ್ – ಪೊಲೀಸ್ ಎನ್ ಕೌಂಟರ್ ನಲ್ಲಿ ಆರೋಪಿ ಸಾವು!
ಪಂಡಿತ್ ಕೇಶವ್ ದೇವ್ ಅವರು ಸ್ವತಂತ್ರ ಅಭ್ಯರ್ಥಿಯಾಗಿದ್ದು, ಅವರ ಚುನಾವಣಾ ಚಿಹ್ನೆ ಚಪ್ಪಲಿ ಆಗಿದೆ. ಸ್ವತಃ ಕೇಶವ್ ದೇವ್ ಅವರೇ ಚಪ್ಪಲಿ ಚುನಾವಣಾ ಚಿಹ್ನೆಗೆ ಅರ್ಜಿ ಸಲ್ಲಿಸಿರುವುದಾಗಿದೆ. ಅದರಂತೆ ಚಿಹ್ನೆ ದೊರೆತ ಬಳಿಕ ಕೊರಳಿಗೆ 7 ಚಪ್ಪಲಿಗಳನ್ನು ಹಾರ ಮಾಡಿ ಹಾಕಿಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಕೇಶವ್ ಅವರು ಭ್ರಷ್ಟಾಚಾರವನ್ನು ವಿರೋಧಿಸುವ ಮೂಲಕವೂ ಸುದ್ದಿಯಲ್ಲಿದ್ದಾರೆ.
RTI ಕಾರ್ಯಕರ್ತನಾಗಿರುವ ಪಂಡಿತ್ ಕೇಶವ್ ದೇವ್ ಅವರು ಭಾರತೀಯ ಹಿಂದೂ ರಾಷ್ಟ್ರ ಸೇನೆ ಮತ್ತು ಭ್ರಷ್ಟಾಚಾರ ವಿರೋಧಿ ಸೇನೆ ಎಂಬ ಸಂಘಟನೆಗಳನ್ನು ಸಹ ನಡೆಸುತ್ತಿದ್ದಾರೆ. ಎರಡು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಗರ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲನುಭವಿಸಬೇಕಾಯಿತು.