ದಾವಣಗೆರೆ:- ಮನೆ ಅಂದ ಮೇಲೆ ಜಗಳ, ವೈಮನಸ್ಸು ಎಲ್ಲವೂ ಸಹಜ. ಆದ್ರೆ ಇಲ್ಲೊಬ್ಬ ಸೊಸೆ ಒಬ್ಬಳು ತನ್ನ ಅತ್ತೆ ಮಾವನ ಮೇಲಿನ ಸಿಟ್ಟಿಗೆ ಮಾಡಿದ್ದು ಕೇಳಿದ್ರೆ ಅಚ್ಚರಿ ಪಡ್ತೀರಾ!
ಅಷ್ಟಕ್ಕೂ ಸೊಸೆ ಮಾಡಿದ ಕೆಲಸ ಏನು ಎಂದು ತಿಳಿಯಲು ಸುದ್ದಿ ಪೂರ್ತಿ ಓದಿ.
ಮುಸ್ಲಿಮರಿಗೆ ತೊಂದರೆ ಕೊಟ್ರೆ ಇಡೀ ದೇಶವನ್ನೇ ಸುಟ್ಟು ಹಾಕ್ತೀವಿ – ಕೇಂದ್ರ ಸಚಿವರಿಗೆ ಉಗ್ರನ ಬೆದರಿಕೆ!
ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ಅತ್ತೆ-ಮಾವನ ಮೇಲಿನ ಸಿಟ್ಟಿಗೆ ಸೊಸೆ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿರುವ ಘಟನೆ ಜರುಗಿದೆ.
ಚಿದಾನಂದಸ್ವಾಮಿ, ಶಿವನಾಗಮ್ಮ ಅವರ ಜೇಷ್ಠ ಪುತ್ರ ಕುಮಾರಸ್ವಾಮಿಯ ಪತ್ನಿ ರೂಪಾ ಕೆಲ ವರ್ಷಗಳಿಂದ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದಳು. ಆದರೆ ಅತ್ತೆ-ಮಾವ ಆಸ್ತಿಯಲ್ಲಿ ಪಾಲು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಕೋಪಗೊಂಡ ಸೊಸೆ ರೂಪಾ 3 ವರ್ಷದ 40 ಕ್ಕೂ ಹೆಚ್ಚು ಅಡಿಕೆ ಮರಗಳನ್ನ ಕಡಿದು ಹಾಕಿದ್ದಾಳೆ. “ಸೊಸೆ ರೂಪಾ ನಮ್ಮನ್ನು ಸರಿಯಾಗಿ ನೋಡಿಕೊಳ್ಳದೆ, ಹಲ್ಲೆ ಮಾಡುತ್ತಿದ್ದಾಳೆ. ನಮ್ಮ ಬಳಿ 8 ಲಕ್ಷ ರೂಪಾಯಿ ಪಡೆದು ಮನೆ ಕಟ್ಟಿಸಿಕೊಂಡಿದ್ದಾಳೆ. ಎಂದು ಮಾವ ಚಿದಾನಂದಪ್ಪ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಆರೋಪಿ ರೂಪಾಳನ್ನು ಅರೆಸ್ಟ್ ಮಾಡಿದ್ದಾರೆ.