ಮೈಸೂರು: ಬಿಜೆಪಿಯಿಂದ ಎರಡೂ ಕಾಲು ಹೊರಗಿಟ್ಟು ಕಾಂಗ್ರೆಸ್ ಗೆ ಜೊತೆಗೆ ಸಖ್ಯ ಬೆಳೆೆಸಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಇದೀಗ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಗೆ ಮತ ಹಾಕುತ್ತೇನೆ, ಜೊತೆಗೆ ಅವರ ಪರ ಪ್ರಚಾರ ಮಾಡ್ತೇನೆ ಎಂದು ಹೇಳಿದ್ದಾರೆ. ಇದೇವೇಳೆ ಶಿಕ್ಷಣ ಇಲಾಖೆ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬದಲಾಯಿಸಲು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಯದುವೀರ್ ಪರ ಬ್ಯಾಟಿಂಗ್ ನಡೆಸಿದರು. ಯದುವೀರ್ ಅವರ ಪರ ಪ್ರಚಾರಕ್ಕೆ ಹೋಗುತ್ತೇನೆ. ಯದುವೀರ್ ಗೆ ಟಿಕೆಟ್ ಕೊಟ್ಟ ಬಳಿಕ, ನನಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ರೆ ನಾನು ಚುನಾವಣೆಗೆ ನಿಲ್ಲುತ್ತಿರಲಿಲ್ಲ. ರಾಜಕಾರಣ ನಿಂತ ನೀರಲ್ಲ, ಹರಿಯುವ ಗಂಗೆ. ರಾಜಕೀಯ ಧ್ರುವೀಕರಣ ಆಗುತ್ತಿದೆ. ಒಂದು ವೋಟನ್ನ ಯದುವೀರ್ ಗೆ ಹಾಕುವ ಮೂಲಕ ಮಹರಾಜರ ಋಣ ತೀರಿಸಬೇಕು. ಎಂದರು.
ಕಾಫಿ ಪ್ರಿಯರಿಗೆ ಗುಡ್ ನ್ಯೂಸ್..! ಪ್ರತಿದಿನ 3 ಕಪ್ ಫಿಲ್ಟರ್ ಕಾಫಿ ಕುಡಿದರೆ ಡಯಾಬಿಟಿಸ್ ಕಂಟ್ರೋಲ್
ಇದೇ ವೇಳೆ ನಾನು ಬಿಜೆಪಿ ಎಂಎಲ್ ಸಿ ಕೂಡ ಹೌದು. ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ್ದು ನಿಜ. ಪಕ್ಷ ರಾಜಕಾರಣ ಸತ್ತು ಬಹಳ ವರ್ಷ ಆಯಿತು. ಇವತ್ತು ಏನಿದ್ದರು ವ್ಯಕ್ತಿ ರಾಜಕಾರಣ. ವ್ಯಕ್ತಿ ರಾಜಕಾರಣ ವೈಭವೀಕರಣ ಆಗುತ್ತಿದೆ ಎಂದು ಮಾರ್ಮಿಕವಾಗಿ ಹೇಳಿದರು. ಇದೇ ವೇಳೆ ರಾಜ್ಯದ ಶಿಕ್ಷಣ ಇಲಾಖೆಯ ನಡೆಗಳ ಬಗ್ಗೆ ಮಾಜಿ ಶಿಕ್ಷಣ ಸಚಿವ ವಿಶ್ವನಾಥ್ ಟೀಕೆ ಮಾಡಿದ್ದಲ್ಲದೆ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಬದಲಾಯಿಸಿ ಎಂದೂ ಒತ್ತಾಯಿಸಿದರು.
5,8,9ನೇ ತರಗತಿ ಬೋರ್ಡ್ ಪರೀಕ್ಷೆ ಕಾನೂನು ಬಾಹಿರವಾಗಿದೆ. ಶಿಕ್ಷಣ ಹಕ್ಕು ಕಾಯಿದೆ ಉಲ್ಲಂಘನೆ ಮೂಲಕ ಎರಡನೇ ಬಾರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಿಂದ ಚೀಮಾರಿ ಹಾಕಿಸಿಕೊಂಡಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೂಡ ಇದನ್ನೇ ಮಾಡಿತ್ತು. ಈಗ ಕಾಂಗ್ರೆಸ್ ಸರ್ಕಾರ ಕೂಡ ಇದೆ ನೀತಿ ಅನುಸರಿಸಿದೆ ಎಂದರು.