ಚಾಮರಾಜನಗರ:- ರಾಜ್ಯದಲ್ಲಿರುವುದು ಜನವಿರೋಧಿ ಸರ್ಕಾರವಾಗಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆ ವಿಶ್ವದ ಗಮನ ಸೆಳೆಯುತ್ತಿದೆ. 10 ವರ್ಷದ ಬಳಿಕವೂ ಪ್ರಧಾನಿ ಮೋದಿಯವರ ಆಡಳಿತದ ಪರವಾದ ಅಲೆ ಹೆಚ್ಚಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮೋದಿಯವರ ದೂರದೃಷ್ಟಿಯನ್ನು ಮೆಚ್ಚಿದ್ದಾರೆ
ದೇಶದ ಹಿತದೃಷ್ಟಿಯಿಂದ ಹೆಚ್.ಡಿ ದೇವೇಗೌಡರು ಎನ್.ಡಿ.ಎ ಜೊತೆ ಕೈಜೋಡಿಸಿದ್ದಾರೆ. ರಾಜ್ಯದಲ್ಲಿ ಹತ್ತು ತಿಂಗಳ ಹಿಂದೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜನವಿರೋಧಿಯಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯ ರಾಜ್ಯದ ಪಾಲನ್ನು ಕಡಿತಗೊಳಿಸಿದ್ದಾರೆ. ಹಾಲಿಗೆ ಕೊಡಲಾಗುತ್ತಿದ್ದ ಹಾಲಿನ ಪ್ರೋತ್ಸಾಹ ಧನವನ್ನು ಕಾಂಗ್ರೆಸ್ ಸರ್ಕಾರ ಬಾಕಿ ಕೊಟ್ಟಿಲ್ಲ. ವಿದ್ಯಾರ್ಥಿಗಳಿಗೆ ಕೊಡಲಾಗುತ್ತಿದ್ದ ವಿದ್ಯಾಸಿರಿ ಯೋಜನೆ ಮೊಟಕುಗೊಳಿಸಿದ್ದಾರೆ
24 ಸಾವಿರ ಕೋಟಿ ರೂಪಾಯಿ ಎಸ್.ಸಿ.ಪಿ/ಟಿಎಸ್.ಪಿ ಹಣ ಗ್ಯಾರೆಂಟಿ ಯೋಜನೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.