ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈಶ್ವರಪ್ಪಗೆ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸಾಥ್ ನೀಡಿದ್ದಾರೆ. ಕೆಲ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಈಶ್ವರಪ್ಪ, ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆಗಿರುವ ಗುರುದತ್ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಈಶ್ವರಪ್ಪ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿದರು.
ಪತ್ನಿ ತನ್ನ ಮಾಜಿ ಪತಿಗೆ ಪ್ರತಿ ತಿಂಗಳು 10 ಸಾವಿರ ರೂ. ಜೀವನಾಂಶ ನೀಡಬೇಕು: ಹೈಕೋರ್ಟ್ ಆದೇಶ
ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪ, ”ಶಿವಮೊಗ್ಗ ಲೋಕಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ನಾಮಪತ್ರ ಸಲ್ಲಿಕೆಗೂ ಮುನ್ನ 8 ವಿಧಾನಸಭೆ ಕ್ಷೇತ್ರದಿಂದ ಜನರು ಬಂದಿದ್ದಾರೆ. ಮನೆ, ಮನೆಗೆ ಕಾರ್ಯಕರ್ತರು ಹೋಗಿ ಹಿಂದುತ್ವಕ್ಕೆ ಅನ್ಯಾಯ ಆಗಿರುವ ಬಗ್ಗೆ ಹೇಳುತ್ತಾರೆ. ಶಿವಮೊಗ್ಗದ ಜನರು ನನಗೆ ಬೆಂಬಲ ಕೊಡುತ್ತಾರೆ. ಈಗಾಗಲೇ 25-30 ಸಾವಿರ ಜನ ಬಂದು ಬೆಂಬಲ ಸೂಚಿಸಿದ್ದಾರೆ. ನಾಮಪತ್ರ ಸಲ್ಲಿಸಲ್ಲ ಎಂದವರಿಗೆ ಮೆರವಣಿಗೆಯೇ ಉತ್ತರ” ಎಂದು ತಿರುಗೇಟು ನೀಡಿದರು.