ಬೆಂಗಳೂರು:- ರಾಜಧಾನಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ ಮಾಡಿರುವಂತಹ ಘಟನೆ ಜರುಗಿದೆ.
ದೊಡ್ಡಬಳ್ಳಾಪುರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮನ: ಬಿಜೆಪಿ ಅಭ್ಯರ್ಥಿ ಪರ ಮತ ಯಾಚನೆ!
ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27 ವರ್ಷದ ಯುವತಿಗೆ ಆದಿತ್ಯ ಸಿಂಗ್ ಎಂಬಾತ ವಂಚಿಸಿದ್ದಾನೆ. ಜಿಮ್ನಲ್ಲಿ ಯುವತಿಗೆ ಆದಿತ್ಯ ಸಿಂಗ್ ಪರಿಚಯ ಆಗಿದ್ದ. ಬಳಿಕ ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದರು. ಮದುವೆ ಆಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್ ನಿರಾಕರಿಸಿದ್ದು, ಯುವತಿ ಮೇಲೆ ಹಲ್ಲೆ, ಚಾಕುವಿನಿಂದ ಇರಿದು ಗೋಡೆಗೆ ತಲೆ ಚಚ್ಚಿದ ಆರೋಪ ಮಾಡಲಾಗಿದೆ. ಸದ್ಯ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ