ಮಂಗಳೂರು:- 2024 ರ ಲೋಕಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರಿದ್ದು, ಉಭಯ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿದೆ.
HDK ಹೇಳಿಕೆ ನೋವು ತಂದಿದೆ, ತಾಯಿ ಹೊಟ್ಟೆಯಲ್ಲಿ ಹುಟ್ಟಿದವರು ಈ ರೀತಿ ಮಾತಾಡಲ್ಲ – ಡಿಕೆಶಿ!
ಅದರಂತೆ ಪ್ರಧಾನಿ ಮೋದಿ ಅವರು ಇಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು, ಮೈಸೂರಿನ ಬಳಿಕ ಮಂಗಳೂರಿಗೆ ತೆರಳಿ ಭರ್ಜರಿ ಪ್ರಚಾರ ಮಾಡಿದ್ದಾರೆ.
ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್ಶೋ ನಡೆಸಲಿದ್ದಾರೆ. ಎಡಿಜಿಪಿ ಚಂದ್ರಶೇಖರ್, ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ಅಂತಿಮ ಹಂತದ ಭದ್ರತೆ ಪರಿಶೀಲಿಸಲಾಗಿದೆ. ಉತ್ಸಾಹದಿಂದ ಮೋದಿಗಾಗಿ ಲಾಲ್ಬಾಗ್ ಜಂಕ್ಷನ್ನಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದಾರೆ.