ಮೈಸೂರು:- ಮೋದಿ ಇರೋವರೆಗೆ ಹಿಂದೂ ಧರ್ಮ, ಸನಾತನ ಧರ್ಮದ ನಾಶ ಅಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮೈಸೂರು ಸಾಂಸ್ಕೃತಿಕ ರಾಜಧಾನಿ. ಇಲ್ಲಿನ ದಸರಾ ಇಡೀ ದೇಶಕ್ಕೆ ಪ್ರಖ್ಯಾತಿ. ತಾಯಿ ಚಾಮುಂಡಿ, ತಾಯಿ ಭುವನೇಶ್ವರಿ, ತಾಯಿ ಕಾವೇರಿ ಪಾದಕ್ಕೆ ನನ್ನ ಪ್ರಣಾಮಗಳು. ಸಂಸದೀಯ ಕ್ಷೇತ್ರದಲ್ಲಿ ದೇವೇಗೌಡರದ್ದು ಬಹಳ ದೊಡ್ಡ ಹೆಸರು. ಅವರಿಗೆ ನನ್ನ ನಮನಗಳು ಎಂದು ಪ್ರಧಾನಿ ಮಾತು ಆರಂಭಿಸಿದರು
ಬಿಜೆಪಿ ಸಂಕಲ್ಪ ಪತ್ರ ಮೋದಿ ಕೀ ಕಾ ಗ್ಯಾರಂಟಿಯಾಗಿದೆ. ಬಡವರಿಗೆ 3 ಕೋಟಿ ಮನೆ ನಿರ್ಮಾಣ ಮಾಡುತ್ತೇವೆ. ಉಚಿತ ಪಡಿತರ ವಿತರಣೆ ಮಾಡುತ್ತೇವೆ. ಆಯುಷ್ಮಾನ್ ಭಾರತ್ ಅಡಿ ಹಿರಿಯರಿಗೆ ಉಚಿತ ವೈದ್ಯಕೀಯ ಸೇವೆ ಎಂದು ಹೇಳುವ ಮೂಲಕ ಪ್ರಧಾನಿಯವರು ಬಿಜೆಪಿ ಸಂಕಲ್ಪ ಪತ್ರದ ಬಗ್ಗೆ ಹೇಳಿದರು.
ಕರ್ನಾಟಕ ಐಟಿ ಹಬ್ ಆಗಿದೆ. ಅದನ್ನು ಇನ್ನಷ್ಟು ವಿಸ್ತರಿಸುತ್ತೇವೆ. ಕನ್ನಡ ಸಮೃದ್ಧ ಭಾಷೆ. ಈ ಭಾಷೆಯ ವ್ಯಾಪ್ತಿಯನ್ನು ನಾವು ಇನ್ನಷ್ಟು ವಿಸ್ತರಣೆ ಮಾಡುತ್ತೇವೆ. ಸ್ಥಳೀಯ ಭಾಷೆಗಳ ಬೆಳವಣಿಗೆಗೆ ನಮ್ಮ ಸರ್ಕಾರ ಬದ್ಧವಾಗಿದೆ
ದೇವೇಗೌಡರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತೇವೆ. ಅವರ ಅನುಭವದ ಸಲಹೆ ಪಡೆಯುತ್ತೇವೆ. ನಿಮ್ಮ ಒಂದು ಮತ ನನ್ನ ಶಕ್ತಿ ಹೆಚ್ಚಿಸುತ್ತದೆ. ದೇವೇಗೌಡರ ಮಾರ್ಗದರ್ಶನ, ಅನುಭವಿ ರಾಜಕಾರಣಿ ಯಡಿಯೂರಪ್ಪ, ಹೆಚ್ಡಿ ಕುಮಾರಸ್ವಾಮಿಅವರ ಸಹಯೋಗ ನಮ್ಮ ಶಕ್ತಿ ಹೆಚ್ಚಿಸಿದೆ. ಮೈಸೂರಿನಲ್ಲಿ ಶಕ್ತಿ ದೇವಿಯ ಆಶೀರ್ವಾದ ನಮಗೆ ಸಿಕ್ಕಿದೆ. ಇದು ಕರ್ನಾಟಕದ ಜನತೆಯ ಆಶೀರ್ವಾದ ಎಂದು ಭಾವಿಸುತ್ತೇನೆ ಎಂದು ಹೇಳಿದರು.
ಸುತ್ತೂರು ಮಠದ ಶ್ರೀಮಂತ ಪರಂಪರೆ ಇದೆ. ರಾಷ್ಟ್ರ ಕವಿ ಕುವೆಂಪು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಕೃಷ್ಣರಾಜ ಒಡೆಯರ್ ಅವರ ಕೆಲಸದ ಶ್ರೀಮಂತ ಪರಂಪರೆ ಇದೆ. ಕಾಂಗ್ರೆಸ್ ನ ಟುಕ್ಡೆ ಟುಕ್ಡೆ ಗ್ಯಾಂಗ್ ದೇಶ ಸುತ್ತುತ್ತಿದೆ. ಖತರ್ನಾಕ್ ಐಡಿಯಾದೊಂದಿಗೆ ದೇಶ ಸುತ್ತುತ್ತಿದೆ ಎಚ್ಚರಿಕೆ ಇರಲಿ. ಇಡೀ ದೇಶ ಕಾಂಗ್ರೆಸ್ ವಿರುದ್ಧ ಮಾತನಾಡುತ್ತಿದೆ. ಭಾರತ್ ಮಾತಾ ಕೀ ಜೈ ಎನ್ನಲು ಕಾಂಗ್ರೆಸ್ ಅನುಮತಿ ಬೇಕಾ?. ದೇಶ ವಿರೋಧಿ ಕಾಂಗ್ರೆಸ್ ನಮಗೆ ಬೇಕಾ? ಎಂದು ಮೋದಿ ಹೇಳಿದರು.