ಲೋಕಸಭೆ ಚುನಾವಣೆಗೆ ಎರಡನೇ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಉಮೇಶ್ ಜಾಧವ್ ಕಲಬುರಗಿಯಲ್ಲಿ ಇವತ್ತು ನಾಮಪತ್ರ ಸಲ್ಲಿಸಿದ್ರು.. ನಾಮಪತ್ರದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ರು.
ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ರಾಲಿ ಮಾಡುವ ಮೂಲಕ ಕೇಸರಿ ಪಡೆಯ ಶಕ್ತಿ ಪ್ರದರ್ಶನ ನಡೆಯಿತು. ನಗರೇಶ್ವರ ಶಾಲಾ ಮೈದಾನ ದಿಂದ ಶುರುವಾದ ರಾಲಿಯಲ್ಲಿ ಸಾವಿರಾರು ಕಾರ್ಯಕರ್ತರು ಹಾಜರಿದ್ದು ಸಂಸದ ಉಮೇಶ್ ಜಾಧವ್ ಜೊತೆ ನಾವಿದ್ದೀವಿ ಅಂತ ತೋರಿಸಿಕೊಟ್ರು.