ಬೆಂಗಳೂರು :- ಸಿಎಂ ಗೆ ಭದ್ರತಾ ಲೋಪದಡಿ PSI ಸೇರಿ ನಾಲ್ವರು ಮಂದಿಯನ್ನು ಅಮಾನತು ಮಾಡಿ ಪೊಲೀಸ್ ಕಮಿಷನರ್ ದಯಾನಂದ್ ಬಿ ಅವರು ಆದೇಶ ಹೊರಡಿಸಿದ್ದಾರೆ.
ಭರ್ಜರಿ ಸಿಕ್ಸರ್, ಬೌಂಡರಿ- ರನ್ ಹೊಳೆಯಲ್ಲಿ ತೇಲಾಡಿದ ಸನ್ ರೈಸರ್ಸ್ !
ಕಳೆದ ತಿಂಗಳು ಸಿದ್ದರಾಮಯ್ಯ ಪ್ರಚಾರದ ವೇಳೆ ರಿಯಾಜ್ ಎಂಬಾತ ಪಿಸ್ತೂಲ್ ಇಟ್ಕೊಂಡು ಬಂದು ಹಾರ ಹಾಕಿದ್ದ. ಈ ಘಟನೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಬಳಿಕ ಆತನನ್ನು ಸಿದ್ದಾಪುರ ಪೊಲೀಸ್ರು ವಿಚಾರಣೆ ನಡೆಸಿ ಕಳುಹಿಸಿದ್ದರು. ಘಟನೆಯಾದ ಎರಡು ವಾರಗಳ ನಂತರ ಸಿಎಂ ಭದ್ರತಾ ಕರ್ತವ್ಯದಲ್ಲಿದ್ದ ಸಿದ್ದಾಪುರ ಸಬ್ ಇನ್ಸ್ಪೆಕ್ಟರ್ ಮೆಹಬೂಬ, ASI ನಾಗರಾಜು ಹಾಗೂ ಇಬ್ಬರು ಸಿಬ್ಬಂದಿ ಅಮಾನತು ಮಾಡಲಾಗಿದೆ.
ಏಪ್ರಿಲ್ 08 ರಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ವ್ಯಕ್ತಿಯೋರ್ವ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಸಿದ್ದರಾಮಯ್ಯಗೆ ಹೂವಿನ ಹಾರ ಹಾಕಿ ತೆರಳಿದ್ದ. ಇದರಿಂದ ಪೊಲೀಸರ ಭದ್ರತಾ ಲೋಪ ಕಂಡುಬಂದಿತ್ತು. ಬಳಿಕ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು