ಹಾಸನ :- ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹರಿದಾಡುತ್ತಿರುವ ಪ್ರಕರಣ ರಾಜ್ಯದಲ್ಲಿ ಗಂಭೀರ ಸ್ವರೂಪ ಪಡೆದುಕೊಂಡಿದೆ.
Hubballi: ರೈತನಿಂದ ಮೆಣಸಿನಕಾಯಿ ಖರೀದಿಸಿ 54 ಲಕ್ಷ ಹಣ ನೀಡದೆ ವಂಚನೆ..!
ಈಗಾಗಲೇ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತನಿಖೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ.
ಈ ನಡುವೆ ಮತದಾನ ಮುಗಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಜರ್ಮನಿಗೆ ಹಾರಿದ್ದಾರೆ ಎಂದು ವರದಿಯಾಗಿದೆ.
ಇನ್ನೂ ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋಗಳ ತುಣುಕು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಕೂಡ ಮೇಲ್ನೋಟಕ್ಕೆ ಕಂಡು ಬರುತ್ತಿರುವುದರಿಂದ ಎಸ್ ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದು, ಅವರ ಮನವಿಯ ಮೇರೆಗೆ ತನಿಖೆ ನಡೆಸಲು ನಿರ್ಣಯಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ಹಲವು ದಿನಗಳಿಂದಲೂ ಹಾಸನದ ವಿಡಿಯೋ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿವೆ.
ಸಾಕಷ್ಟು ಜನರು ವಿಡಿಯೋ ತುಣುಕುಗಳನ್ನು ನೋಡಿರುವುದಾಗಿ ಬರೆದುಕೊಳ್ಳುತ್ತಿದ್ದಾರೆ.
ಕೆಲವೊಂದು ವಿಡಿಯೋಗಳಲ್ಲಿ ಹಿರಿಯ ವಯಸ್ಸಿನ ಮಹಿಳೆಯರಿಗೂ ದೌರ್ಜನ್ಯ ಎಸಗಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಲಾಗಿದೆ.