ಚಾಮರಾಜನಗರ:- ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನೆಲೆ ಇಂದು ಈ 2 ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.
ಪ್ರಧಾನಿ ಮೋದಿ ಭಾಷಣ ತಿರುಚಿ ಪೋಸ್ಟ್ – ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ದೂರು..!
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದು, ಇಂದು ದಿವಂಗತ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದು, ‘ದಿವಂಗತ ಶ್ರೀನಿವಾಸ ಪ್ರಸಾದ್ರವರ ನಿಧನಕ್ಕೆ ಗೌರವ ಸೂಚಕವಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನಡೆಯಲಿದೆ. 15 ದಿನಗಳ ಹಿಂದೆ ಭೇಟಿಯಾಗಿದ್ದಾಗ ರಾಜಕೀಯ ಮಾತನಾಡಿದೆವು. ಹೋರಾಟದ ಬದುಕಿನಲ್ಲಿ ಇರುವವರಿಗೆ ಸಂತೋಷದ ಕ್ಷಣಗಳು ಕಡಿಮೆ. ಬಹಳ ವರ್ಷಗಳ ನಂತರ ಭೇಟಿಯಾಗಿದ್ದ ಕಾರಣ ಸಂತೋಷವಾಗಿದ್ದೇನೆ ಎಂದು ನನ್ನ ಬಳಿ ಹೇಳಿದ್ದರು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮುಂದುವರಿದು ತಮ್ಮ ಪೋಸ್ಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ‘ನಾನು ಮತ್ತು ಶ್ರೀನಿವಾಸ ಪ್ರಸಾದ್ ಅವರು ಜೊತೆಯಲ್ಲಿಯೇ ರಾಜಕಾರಣ ಮಾಡಿದವರು. ಜನತಾ ಪಕ್ಷ ಹಾಗೂ ಕಾಂಗ್ರೆಸ್ನಲ್ಲಿ ಒಟ್ಟಿಗಿದ್ದವರನ್ನು ಕಳೆದುಕೊಂಡಾಗ ಬಹಳ ದುಃಖವಾಗುತ್ತದೆ. ಶ್ರೀನಿವಾಸ ಪ್ರಸಾದ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿ ಅವರ ಕುಟುಂಬ ವರ್ಗದವರೊಂದಿಗೆ ಮಾತನಾಡಿದ್ದೆ. ಆದರೆ ಅಂಗಾಂಗ ವೈಫಲ್ಯದಿಂದಾಗಿ ಅವರ ನಿಧನವಾಗಿದೆ. ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ. 2013 ರಲ್ಲಿ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಯಾಗಿ ಹಲವು ವರ್ಷಗಳ ಕಾಲ ಆರೋಗ್ಯವಾಗಿದ್ದರು’ ಎಂದು ಹೇಳಿದ್ದಾರೆ.