ಪಶ್ಚಿಮ ಬಂಗಾಳದ ರಾಜಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಬೆದರಿಕೆ ಕರೆ ಬಂದ ಘಟನೆ ಜರುಗಿದೆ.
ನಾವು ಟೆರರೂಸರ್ಸ್ ಎಂಬ ಭಯೋತ್ಪಾದಕ ಗುಂಪಿನವರು. ನಿಮ್ಮ ಕಟ್ಟಡದ ಒಳಗೆ ಸ್ಫೋಟಕ ಸಾಧನಗಳನ್ನು ಇರಿಸಿದ್ದೇವೆ. ಅನೇಕ ಮಂದಿ ಮಂದಿ ಸಾಯುತ್ತಾರೆ, ರಕ್ತದ ಮಡುವಿನಲ್ಲಿ ಬೀಳುತ್ತೀರಿ ಎಂದು ಬೆದರಿಕೆ ಹಾಕಿದ್ದಾರೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಸೆಲ್ಯುಲಾರ್ ಜೈಲು ಮತ್ತು ಬಿಹಾರ ರಾಜಭವನಕ್ಕೂ ಇದೇ ರೀತಿಯ ಸಂದೇಶಗಳು ಬಂದಿವೆ ಎಂದು ವರದಿಯಾಗಿದೆ. ಆದರೆ, ಕೋಲ್ಕತ್ತಾ ಪೊಲೀಸರು ಈ ಸಂದೇಶವನ್ನು ಹುಸಿ ಎಂದು ಕರೆದಿದ್ದಾರೆ. ಸಂದೇಶ ಕಳುಹಿಸಿದವರ ಬಗ್ಗೆ ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ.