ಬೆಳಗಾವಿ: ನನ್ನ ಮಗ ವಿದೇಶದಲ್ಲಿ ಮೃತರಾದಾಗ ಆತನ ಮೃತ ದೇಹ ತರಲು ನಮಗೆ ಪ್ರಧಾನಿ ಮೋದಿ ಅಥವಾ ಅಂದಿನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಹಾಯ ಮಾಡಿದ್ದರು ಎಂಬುದು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ” ನನ್ನ ಪುತ್ರನ ಸಾವು ವಿದೇಶದಲ್ಲಿ ಸಂಭವಿಸಿದ್ದು, ದೇಶಕ್ಕೆ ಪಾರ್ಥೀವ ಶರೀರವನ್ನು ಕರೆತರಲಾಯಿತು. ಇದರಲ್ಲಿ ನರೇಂದ್ರ ಮೋದಿ ಅಥವಾ ಇತರರ ಸಹಾಯ ನಾನು ಕೇಳಿರಲಿಲ್ಲ. ಅಂತಹ ಪ್ರಮೇಹವೇ ಬರಲಿಲ್ಲ. ಇವರೆಲ್ಲ ಸುಳ್ಳು ಹೇಳುತ್ತಿದ್ದಾರೆ ” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪರ ಬೆಂಬಲ ನಿರೀಕ್ಷೆಗೆ ಮೀರಿ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಲಾಗುತ್ತಿದೆ. ಆದರೆ ಮೋದಿಯವರು 2014 ಹಾಗೂ 2019 ರಲ್ಲಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದರು. ಮೋದಿಯವರು , ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ,
KEA Recruitment: PU ಪಾಸಾದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ.! ತಿಂಗಳಿಗೆ 42 ಸಾವಿರ ಸಂಬಳ
ಮೋದಿಯವರು ಸುಳ್ಳು ಹೇಳುತ್ತಿದ್ದಾರೆ. ಮಣಿಪುರದ ಹಿಂಸಾಚಾರ ಘಟನೆಯಲ್ಲಿ ಕೇಂದ್ರ ಸರ್ಕಾರ ಏನು ಕ್ರಮ ಕೈಗೊಂಡಿದೆ. 30 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿ ಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 4% ಮೀಸಲಾತಿಯನ್ನು ರದ್ದು ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಹೋದಾಗ, ಸದರಿ ಮೀಸಲಾತಿಯನ್ನು ಮೀಸಲಾತಿಯನ್ನು ಮುಂದುವರೆಸುವುದಾಗಿ ಬೊಮ್ಮಾಯಿ ಸರ್ಕಾರ ಮುಚ್ಚಳಿಕೆಯನ್ನು ಬರೆದುಕೊಟ್ಟಿತು ಎಂದರು.