ಬೆಳಗಾವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ರಾಮ ಸೇತುವೆಗೆ ಹೊಗಿ ಪೂಜೆ ಸಲ್ಲಿಸಿದರು. ಅದೇ ಕಾಂಗ್ರೆಸಿಗರು ಮಾತ್ರ ತಮ್ಮ ವೋಟ್ ಬ್ಯಾಂಕ್ ಗಾಗಿ ರಾಮ ಮಂದಿರಕ್ಕೆ ಹೊಗುವದನ್ನು ಬಹಿಷ್ಕಾರ ಮಾಡಿದರು ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,
ನರೇಂದ್ರ ಮೋದಿಯವರು ಪ್ರಧಾನಿ ಆದ ನಂತರ ನಮಗೆ ಹೆಮ್ಮೆ ಅನಿಸುತ್ತದೆ. ಈ ಹಿಂದೆ ಬಹಳಷ್ಟು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾಗಾಂಧಿ ನಂತರ ಗಟ್ಟಿಯಾದ ಪ್ರಧಾನಿ ಅಂದರೆ ಅದು ನರೇಂದ್ರ ಮೋದಿ ಅವರು. ಪ್ರಧಾನಿ ನರೇಂದ್ರ ಮೋದಿಯವರು ಭಾರತದ ನಾಯಕರು ಅಷ್ಟೇ ಅಲ್ಲ ವಿಶ್ವಾನಾಯಕರಾಗಿ ಬೆಳೆದು ನಿಂತಿದ್ದಾರೆ ಎಂದು ಅಭಿಪ್ರಾಯಪಟ್ಟರು.
KEA Recruitment: PU ಪಾಸಾದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ.! ತಿಂಗಳಿಗೆ 42 ಸಾವಿರ ಸಂಬಳ
ಈ ಚುನಾವಣೆ ಭಾರತದ ಭದ್ರತೆ , ಆರ್ಥಿಕ ಭದ್ರತೆಗಾಗಿ ನಡೆಯುವ ಚುನಾವಣೆ ಆಗಿದೆ. ಕಳೆದ 10 ವರ್ಷದಿಂದ ನರೇಂದ್ರ ಮೋದಿಯವರು ಉತ್ತಮ ಆಡಳಿತ ನೀಡಿದ್ದಾರೆ. ಭಾರತಕ್ಕಾಗಿ ಹಗಲಿರಳು ದುಡಿಯುವ ನಾಯಕ ಅಂದರೆ ಅದು ನರೇಂದ್ರ ಮೋದಿಯವರು. ತಮ್ಮ ತಾಯಿ ನಿಧನರಾದ ನಂತರವೂ ಒಂದೆ ಒಂದು ದಿನ ರಜೆ ತಗೆದುಕೊಳ್ಳದೆ, ತಾಯಿಯ ಅಂತಮ ಸಂಸ್ಕಾರ ಮಾಡಿ,
ಅಂದೆ ಪಶ್ಚಿಮ ಬಂಗಾಳದಲ್ಲಿ ಕಾರ್ಯಕ್ರಮದಲ್ಲಿ ಭಾಗಿ ಆದರು. ಅಂತಹ ಆದರ್ಶ ವ್ಯಕ್ತಿ ನಮ್ಮ ಪ್ರಧಾನಿ ಆಗಿದ್ದಾರೆ ಎಂದರೆ ನಾವು ಹೆಮ್ಮೆ ಪಡಬೇಕು. ಒಬ್ಬ ಸಾಮಾನ್ಯ ವ್ಯಕ್ತಿ ಪ್ರಧಾನಿ ಆಗಿದ್ದಾರೆ ಎಂದರೆ ಅವರು ದೇವತಾ ಮನುಷ್ಯ. ಸತತ 13 ದಿನಗಳ ಕಾಲ ಉಪವಾಸ ವ್ರತ ಮಾಡಿ, ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿ ಆದರು ಎಂದರು.