ಹಾವೇರಿ: “ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಬಾರದು ಅಂತಾ ಯಾವುದೇ ಪತ್ರ ನಮಗೆ ಬಂದಿಲ್ಲ. ನಮ್ಮ ಗಮನಕ್ಕೆ ಬಂದಿಲ್ಲ. ಯಾರಿಗೆ ಪತ್ರ ಬರೆದಿದ್ದಾರೋ ಗೊತ್ತಿಲ್ಲ” ಎಂದು ತಿಪಕ್ಷದ ನಾಯಕ ಆರ್ ಅಶೋಕ್ ಹೇಳಿದರು. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಕಾನೂನಿಗಿಂತ ಯಾರು ದೊಡ್ಡವರಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಂತ್ರಸ್ತರಿದ್ದವರು ಮುಕ್ತವಾಗಿ ದೂರು ಕೂಡಲು ತಿಳಿಸಿದ್ದಾರೆ ಎಂದರು.
KEA Recruitment: PU ಪಾಸಾದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ.! ತಿಂಗಳಿಗೆ 42 ಸಾವಿರ ಸಂಬಳ
ಈ ಘಟನೆ ಏಲ್ಲಿ ನಡೆಯಿತು.? ಯಾವ ನಡೆಯಿತು ಎಂಬ ಬಗ್ಗೆ ನೊಂದ ತಾಯಿಂದರಿಂದ ಮಾಹಿತಿ ಪಡೆದು ಪೊಲೀಸರು ತನಿಖೆ ನಡೆಸುತ್ತಾರೆ. ಘಟನೆ ಆಗಿದ್ದು ನಿಜ ಅನ್ನೋದು ಆದರೆ ಎಲ್ಲಾ ಕಾನೂನುಗಳು ತನ್ನಿಂದ ತಾನೆ ನಡೆಯುತ್ತಿವೆ. ನಿಜ ಅನ್ನೋ ಕಾರಣಕ್ಕಾಗಿ ಕುಮಾರಸ್ವಾಮಿ ಉಚ್ಚಾಟನೆ ಮಾಡಿದ್ದಾರೆ. ಅದು ಜೆಡಿಎಸ್ ಪಕ್ಷದ ಆಂತರಿಕ ವಿಚಾರ. ಈಗಾಗಲೇ ಕುಮಾರಸ್ವಾಮಿ ಹೇಳಿಕೆ ಕೊಟ್ಟಿದ್ದಾರೆ. ನಮಗೆ ಸಂಬಂಧ ಕೂಡಾ ಇಲ್ಲ ಅಂತಾ ಖಡಕ್ ಆಗಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಕುಮಾರಸ್ವಾಮಿ ಪಾರ್ಟಿಯಿಂದ ಹೊರ ಹಾಕಿದ್ದು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ.