ದಾವಣಗೆರೆ: ಲೈಂಗಿಕ ಕಿರುಕುಳ ಹಗರಣದಲ್ಲಿ ಸಿಲುಕಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರು ಸದ್ಯಕ್ಕೆ ಜರ್ಮನಿಯಲ್ಲಿದ್ದು, ಅವರ ರಿಟರ್ನ್ ಟಿಕೆಟ್ ಅನ್ನು ಸರ್ಕಾರ ಸೀಝ್ ಮಾಡಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ. ಜೊತೆಗೆ, ಈ ವಿಚಾರದಲ್ಲಿ ಯಾರನ್ನೂ ರಕ್ಷಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗಲಿ ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕೇ ಕಾರಣ ಎಂದು ಧಾರವಾಡದ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಮತ್ತಿತರ ಬಿಜೆಪಿ ನಾಯಕರು ನೀಡಿರುವ ಹೇಳಿಕೆಗಳನ್ನು ಅಲ್ಲಗಳೆದ ಪರಮೇಶ್ವರ್, ಈ ಪ್ರಕರಣದಲ್ಲಿ ನಾವು ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.
KEA Recruitment: PU ಪಾಸಾದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ.! ತಿಂಗಳಿಗೆ 42 ಸಾವಿರ ಸಂಬಳ
ಸಂಸದ ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ಮೇಲೆ ಈಗಾಗಲೇ ದೂರು ದಾಖಲಾಗಿದೆ. ರಾಜ್ಯದಲ್ಲಿ ಈ ರೀತಿ ಘಟನೆ ನಡೆದಿದೆ ಎಂದು ಕೂಡಲೇ ತನಿಖೆ ನಡೆಸುತ್ತೇವೆ. ವಿದೇಶಕ್ಕೆ ಓಡಿ ಹೋದ ಪ್ರಜ್ವಲ್ ರ ಪ್ಲೈಟ್ ಟಿಕೇಟ್ ಅನ್ನು ಈಗಾಗಲೇ ಸೀಜ್ ಮಾಡಲಾಗಿದೆ. ಫಾರಂ41ನಲ್ಲಿ ನೋಟೀಸ್ ನೀಡಲಾಗಿದೆ 24 ಗಂಟೆಯ ಒಳಗೆ ತನಿಖೆಗೆ ಹಾಜರಾಗಬೇಕು.
ಇಲ್ಲವಾದರೆ ಅವರನ್ನು ಬಂಧಿಸಬೇಕೋ, ಇಲ್ಲವೇ ಬೇರೆ ಕ್ರಮಕೈಗೊಳ್ಳಬೇಕೋ ಎನ್ನುವುದು ಎಸ್ ಐಟಿ ಸದಸ್ಯರ ವಿವೇಚನೆಗೆ ಬಿಟ್ಟಿದ್ದೇವೆ. ತಪ್ಪಿತಸ್ಥನನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡೋದಿಲ್ಲ. ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ, ಕಾನೂನು ಎಲ್ಲಾರಿಗೂ ಒಂದೇ ಎಂದು ಅವರು ಹೇಳಿದ್ದಾರೆ.