ರಾಯಚೂರು: ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಗೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ. ಆದರೆ ಕಾಂಗ್ರೆಸ್ (Congress) ಇದನ್ನು ಇಡೀ ಎನ್ಡಿಎ (NDA) ಅಪರಾಧ ಎಂಬ ಥರ ಬಿಂಬಿಸುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ (CT Ravi) ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ರಾಯಚೂರಿನ (Raichur) ಸಿಂಧನೂರಿನಲ್ಲಿ ಮಾತನಾಡಿದ ಅವರು, ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ (SIT) ರಚನೆ ಮಾಡಿದೆ, ತನಿಖೆಯಾಗಲಿ. ಇದಕ್ಕೆ ಸಂಬಂಧಪಟ್ಟಂತೆ ಹೆಚ್ಡಿಕೆ ಹೇಳಿಕೆಯನ್ನು ಒಪ್ಪುತ್ತೇವೆ ಎಂದರು.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ಈ ನೆಲದ ಕಾನೂನು ಒಬ್ಬರಿಗೊಂದು ಇನ್ನೊಬ್ಬರಿಗೊಂದು ಇಲ್ಲ. ಎಲ್ಲರಿಗೂ ಒಂದೇ ರೀತಿ ಅಪ್ಲೈ ಆಗುತ್ತೆ. ತನಿಖೆಗೂ ಮುಂಚೆ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಅನ್ನೋದು ಹೊರಬರುತ್ತೆ. ದೂರುದಾರರ ದೂರಿನಲ್ಲಿನ ಹೇಳಿಕೆ ಪ್ರಕಾರ, ಇದು ನಾಲ್ಕೈದು ವರ್ಷದ ಹಿಂದಿನ ಘಟನೆ. ನಾಲ್ಕೈದು ವರ್ಷದ ಹಿಂದೆ ಜನತಾದಳ ಕಾಂಗ್ರೆಸ್ ಜೊತೆ ಇತ್ತು ಅನ್ನೋದು ಇವರು ಮರೆತಿದ್ದಾರೆ. ತನಿಖೆ ಆಗಲಿ, ಸತ್ಯ ಏನೆಂಬುದು ಹೊರಬರಲಿ ಎಂದು ಹೇಳಿದರು.