ಬೆಂಗಳೂರು: ಕೋಪದಲ್ಲಿ ನೇಣು ಹಾಕ್ಕೋ ಹೋಗು ಎಂದು ಹೇಳಿದರೆ ಅದು ಆತ್ಮಹತ್ಯೆಗೆ ಪ್ರಚೋದನೆ ಆಗುವುದಿಲ್ಲ ಎಂದು ಹೇಳಿರುವ ಹೈಕೋರ್ಟ್, ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಚರ್ಚ್ ಪಾದ್ರಿಯ ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧದ ಪ್ರಕರಣ ರದ್ದುಗೊಳಿಸಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಉಡುಪಿಯ ಡೇವಿಡ್ ಡಿಸೋಜಾ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ನ್ಯಾಯಪೀಠವು ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅರ್ಜಿದಾರರ ಪತ್ನಿ ಜತೆಗೆ ಮೃತರು ಸಂಬಂಧ ಹೊಂದಿದ್ದರು. ಈ ವಿಚಾರ ಅವರ ಗಮನಕ್ಕೆ ಬಂದಾಗ ಕೋಪದಲ್ಲಿ ಹೋಗಿ ನೇಣು ಹಾಕ್ಕೋ ಎಂದಿದ್ದಾರೆ. ಇದು ಆತ್ಮಹತ್ಯೆಗೆ ಪ್ರಚೋದನೆ ನೀಡದಂತಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಅಲ್ಲದೆ, ಪಾದ್ರಿಯು 2019 ರ ಅಕ್ಟೋಬರ್ 11 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, 2022 ರಲ್ಲಿ ಅರ್ಜಿದಾರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ದೂರಿನಲ್ಲಿಆರೋಪಿ ಡೇವಿಡ್ ಡಿಸೋಜಾ ಹಾಗೂ ಮೃತ ಪಾದ್ರಿ ಮಹೇಶ್ ಡಿಸೋಜಾ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ಬಳಿಕ ಕೆಲವೇ ಹೊತ್ತಿನಲ್ಲಿ ಪಾದ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತದೆ. ಆದರೆ, ಆತ್ಮಹತ್ಯೆಗೆ ಹಲವು ಕಾರಣ ಇರಬಹುದು. ಅದರಲ್ಲಿಒಂದು ಚರ್ಚ್ ಪಾದ್ರಿಯಾಗಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವುದು ಆಗಿರಬಹುದು. ಮನುಷ್ಯನ ಮನಸ್ಸು ಅತ್ಯಂತ ನಿಗೂಢ, ಮನಸ್ಸಿನ ರಹಸ್ಯ ಬಿಚ್ಚಿಡುವುದು ಅಸಾಧ್ಯ ಎಂದು ಕೋರ್ಟ್ ಹೇಳಿದೆ. ಅರ್ಜಿದಾರರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದ್ದರೂ ಮುಂದಿನ ಪ್ರಕ್ರಿಯೆಗಳಿಗೆ ಅನುಮತಿ ನೀಡುವುದು ನಿಸ್ಸಂದೇಹವಾಗಿ ಕಾನೂನು ಪ್ರಕ್ರಿಯೆ ವಿರುದ್ಧ ನಡೆದಂತಾಗುತ್ತದೆ ಎಂದಿರುವ ನ್ಯಾಯಪೀಠ, ಪ್ರಕರಣ ರದ್ದುಗೊಳಿಸಿದೆ.