ವಿಜಯಪುರ:- ಮಹಿಳೆಯರಿಗೆ ರಕ್ಷಣೆ, ನೆಮ್ಮದಿ ಸಿಕ್ಕಿದ್ದು ಮೋದಿ ಆಡಳಿತದಲ್ಲಿ ಎಂದು ಅಣ್ಣಾಮಲೈ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಈ ವೇಳೆ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಮಾತಾಡುತ್ತಿಲ್ಲ ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ತಿರುಗೇಟು ನಿಡಿದ್ದಾರೆ. ಪ್ರಕರಣದ ಬಗ್ಗೆ ಅಮಿತ್ ಶಾ ಮಾತನಾಡಿ, ತೀವ್ರವಾಗಿ ಖಂಡಿಸಿದ್ದಾರೆ ಎಂದರು.
ಟ್ರಕ್ಗೆ ಡಿಕ್ಕಿ ಹೊಡೆದ ಕಾರು: ಕೂದಲೆಳೆ ಅಂತರದಲ್ಲಿ ಪಾರಾದ ನಿವೃತ್ತ ಐಪಿಎಸ್ ಅಧಿಕಾರಿ… !
ರಾಜ್ಯದಲ್ಲಿ ಕಾಂಗ್ರೆಸ್ನವರದ್ದೇ ಸರ್ಕಾರ ಇದೆ. ಈಗ ಎಸ್ಐಟಿ ಯಾರ ಕೈಯಲ್ಲಿದೆ? ಅವರ ತನಿಖೆಗೆ ಯಾರಾದರೂ ತಡೆ ಒಡ್ಡಿದ್ದಾರಾ? ಯಾರಾದರೂ ಅವರ ಮೇಲೆ ಒತ್ತಡ ಹೇರಿದ್ದಾರಾ? ಅವರದೇ ಸರ್ಕಾರ ಇಟ್ಟುಕೊಂಡು ಸಿಎಂ, ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ. ಇದು ರಾಜಕೀಯಕ್ಕೆ ಮಾತ್ರ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.