ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ಅತ್ಯಂತ ಸಡಗರ ಸಂಭ್ರಮದಿಂದ ಅದ್ಧೂರಿಯಾಗಿ ಜರುಗಿತು. ಬೆಳಿಗ್ಗೆಯಿಂದಲೇ ಬಸವೇಶ್ವರ ದೇವಸ್ಥಾನಕ್ಕೆ ಸುತ್ತ ಮುತ್ತಲಿನ ಗ್ರಾಮದ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಶ್ರೀ ಬಸವೇಶ್ವರ ದರ್ಶನ ಪಡೆದುಕೊಂಡರು. ಬೆಳಗ್ಗೆಯಿಂದಲೇ ಬಸವೇಶ್ವರ ದೇವಸ್ಥಾನದಲ್ಲಿ ವಿವಿಧ ಪೂಜಾ ಕಾರ್ಯಗಳು ಜರುಗಿದವು,
ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಮತ್ತೊಂದು ಶಾಕ್..ದಾಖಲಾಯ್ತು ಕಿಡ್ನಾಪ್ ಕೇಸ್..!
ನಂತರ ಸಂಜೆ ವಿವಿಧ ವ್ಯಾಧ್ಯಾ ಮೇಳಗಳೊಂದಿಗೆ ಅಪಾರ ಭಕ್ತರ ಸಮ್ಮುಖದಲ್ಲಿ ಶ್ರೀ ಬಸವೇಶ್ವರ ಮಹಾ ರಥೋತ್ಸವವು ಜರುಗಿತು. ಈ ಸಂದರ್ಭದಲ್ಲಿ ಹಳ್ಳಿಗುಡಿ ಗ್ರಾಮದ ಭಕ್ತರು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದು ಶ್ರೀ ಬಸವೇಶ್ವರ ದೇವರ ಕೃಪೆಗೆ ಪಾತ್ರರಾದರು.