ಬೆಳಗಾವಿ : ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣವನ್ನು ಕಟುವಾಗಿ ಖಂಡಿಸಿದ ಹುಬ್ಬಳ್ಳಿ ನೇಹಾ ತಂದೆ ನಿರಂಜನ ಹಿರೇಮಠ ” ಪ್ರಜ್ವಲ್ ರೇವಣ್ಣನವರನ್ನು 3 ಸಾವಿರ ತುಂಡು ಮಾಡಿ ಸಂತ್ರಸ್ತರಿಗೆ ಹಂಚಿ ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಿಗೆ ಮಾತನಾಡಿದ ಅವರು, ” ಪ್ರಜ್ವಲ್ ರೇವಣ್ಣ ಅವರಿಗೆ ಎಂತಹ ಶಿಕ್ಷೆ ಕೊಟ್ಟರೂ ಕಡಿಮೆಯೇ. ಅವರನ್ನು ತುಂಡು ತುಂಡು ಮಾಡಿ ಸಂತ್ರಸ್ತ 3 ಸಾವಿರ ಹೆಣ್ಣು ಮಕ್ಕಳಿಗೆ ಹಂಚಬೇಕು ಎಂದು ಆಕ್ರೋಶದಿಂದ ನುಡಿದರು. ಈ ಘಟನೆಯ ವಿರುದ್ಧ ಶೀಘ್ರದಲ್ಲೇ ನಾವೂ ಪ್ರತಿಭಟನೆ ನಡೆಸಲಿದ್ದೇವೆ ” ಎಂದು ತಿಳಿಸಿದರು.
BHEL Recruitment: ತಿಂಗಳಿಗೆ ₹ 95 ಸಾವಿರ ಸಂಬಳ..! BHELನಲ್ಲಿ ಬಂಪರ್ ಉದ್ಯೋಗಾವಕಾಶ – ಇಂದೇ ಅರ್ಜಿ ಸಲ್ಲಿಸಿ
ಹಾಸನ ಸಂಸದ ಪ್ರಜ್ವಲ್ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿ ಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಹಾಸನ ನಗರದಲ್ಲಿ ಪ್ರತಿಭಟನೆ ನಡೆಸಿದರು. ‘‘ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಅಶ್ಲೀಲ ದೃಶ್ಯಗಳ ಪೆನ್ಡ್ರೈವ್ ಸೋರಿಕೆ ಆಗಿದೆ. ಹಣ, ಅಧಿಕಾರದ ಅಮಲಿನಲ್ಲಿನೂರಾರು ಹೆಣ್ಣು ಮಕ್ಕಳ ಘನತೆಗೆ ಅಗೌರವ ತಂದಿರುವ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು,’’ ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.