ಬೆಂಗಳೂರು:- ನಾಳೆ ಲೋಕಸಭಾ ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಸಾಧ್ಯತೆ ಇದೆ.
ಸಕ್ಕರೆ ನಾಡಿನಲ್ಲಿ ನಿಂತಿಲ್ಲ ಭ್ರೂಣಲಿಂಗ ಪತ್ತೆ, ಹತ್ಯೆ ಕೇಸ್… ಆರೋಗ್ಯ ಇಲಾಖೆ ಕ್ವಾಟರ್ಸ್ನಲ್ಲೇ ಕೃತ್ಯ ಬಯಲಿಗೆ..!
ರಾಜ್ಯದ 14 ಕ್ಷೇತ್ರಗಳಿಗೆ ನಾಳೆ ಎರಡನೇ ಹಂತದ ಮತದಾನ ನಡೆಯಲಿದೆ. ಉತ್ತರ ಕರ್ನಾಟಕ ಭಾಗದ ತಮ್ಮ ಊರುಗಳಿಗೆ ತೆರಳುವ ನಿರೀಕ್ಷೆಯಿರುವುದರಿಂದ ಇಂದು ಸಂಜೆ ಮೆಜೆಸ್ಟಿಕ್ ಸುತ್ತಮುತ್ತ ಹಾಗೂ ನಗರದ ಇತರ ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
KSRTC ಮೆಜೆಸ್ಟಿಕ್ನಿಂದ ಉತ್ತರ ಕರ್ನಾಟಕದ ಸ್ಥಳಗಳಿಗೆ ಹೆಚ್ಚುವರಿ ಬಸ್ಗಳನ್ನು ಓಡಿಸಲಿದೆ. ಟ್ರಾಫಿಕ್ ಜಾಮ್ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.
ಮತ್ತೊಂದೆಡೆ, ಮತದಾನಕ್ಕಾಗಿ ಉತ್ತರ ಕರ್ನಾಟಕಕ್ಕೆ ಹೋಗುವ ಜನರಿಗೆ ಅನುಕೂಲವಾಗುವಂತೆ ನೈಋತ್ಯ ರೈಲ್ವೆ ಸೋಮವಾರ ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಶೇಷ ರೈಲು ಓಡಿಸಲಿದೆ.