ಬೆಂಗಳೂರು: ನ್ಯಾಯ ಕೇಳಲು ಹೋದ ವ್ಯಕ್ತಿಗೆ ಕಪಾಳಕ್ಕೆ ಹೊಡೆದಿ ಪರಿಣಾಮ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ವಿಭಾಗದ ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳತ್ತೂರು ಕಾಲೋನಿಯಲ್ಲಿ ನಡೆದಿದೆ. ಪ್ರಭುರಾಮ್ ಪ್ರಸಾದ್ (33) ಮೃತ ವ್ಯಕ್ತಿ. ಸ್ಥಳೀಯ ಪ್ರಭಾವಿ ಅನಿಲ್ ಕಪಾಳಕ್ಕೆ ಹೊಡೆದ ವ್ಯಕ್ತಿ. ಮೃತ ಪ್ರಭುರಾಮ್ ನಿನ್ನೆ ತಂಗಿ ಮಗನ ಜೊತೆ ಹಬ್ಬಕ್ಕೆಂದು ಬೈಕ್ನಲ್ಲಿ ದೇಗುಲದ ಬಳಿ ಹೋಗಿದ್ದ.
ದಾರಿ ಮಧ್ಯೆ ಬೈಕ್ನಲ್ಲಿ ಸೌಂಡ್ ಬರ್ತಿದೆ ಅಂತಾ ಬೈಕ್ನ್ನು ಸೈಡ್ ಹಾಕಿ ಪರಿಶೀಲನೆ ಮಾಡುತ್ತಿದ್ದ ವೇಳೆ ಕಾರಿನಲ್ಲಿ ಬಂದ ಪರಿಚಯಸ್ಥ ಅನಿಲ್ ಕುಮಾರನ ಹೆಂಡತಿ ಸಹಾನ ಗೌಡ ಬೈಕ್ಗೆ ಟಚ್ ಮಾಡಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಮನೆ ಬಳಿ ಬಾ ಮಾತನಾಡೋಣ ಎಂದು ಹೊರಟು ಹೋಗಿದ್ದಾರೆ. ಪ್ರಭುರಾಮ್ ಮನೆ ಬಳಿ ಹೋದಾಗ ಮುಖಕ್ಕೆ 4-5 ಬಾರಿ ಅನಿಲ್ ಎಂಬುವವರು ತಳಿಸಿದ್ದು,
ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು..
ಬಳಿಕ ಮನೆಗೆ ಹೋಗಿ ನೋವಿನಲ್ಲೇ ಮಲಗಿದ್ದ ಪ್ರಭುರಾಮ್, ರಾತ್ರಿ ಸುಮಾರು 1 ಗಂಟೆಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ, ಘಟನೆ ಸಂಬಂಧ ಸದ್ಯ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಿಲ್ ಕುಮಾರ್ ಪ್ರಭಾವಿ ವ್ಯಕ್ತಿಯಾಗಿದ್ದು ತನ್ನ ದುರಹಂಕಾರದಿಂದ ಪ್ರಭು ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದರಿಂದಲ್ಲೆ ಪ್ರಭು ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.