ಹುಬ್ಬಳ್ಳಿ : ಹಾಸನ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋ ಪೆನ್ ಡ್ರಾಯ್ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೈವಾಡ ಇದ್ದು ಸಚಿವ ಸಂಪುಟದಿಂದ ಕೈ ಬೀಡಬೇಕು ಎಂದು ಆಗ್ರಹಿಸಿ ಜಾತ್ಯಾತೀತ ಜನತಾದಳ ಕಾರ್ಯಕರ್ತರು ಹಾಗೂ ಪ್ರಮುಖರು ಶಿವಕುಮಾರ್ ವಿರುದ್ಧ ಬೃಹತ್ ಪ್ರತಿಭಟನೆ ಮಾಡಿದರು.
ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ ಬಳಿ ಡಿಸಿಎಂ ಡಿಕೆ ಶಿವಕುಮಾರ್ ಕೂಡಲೇ ರಾಜೀನಾಮೆಗೆ ಕೂಡಬೇಕು ಎಂದು ಆಗ್ರಹಿಸಿದರು.ಸರ್ಕಾರದ ವಿರುದ್ಧ ಜೆಡಿಎಸ್ ವತಿಯಿಂದ ಆಯೋಜನೆ ಮಾಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಕೊಡಿ ಕಾರಲಾಯಿತು.ಹಾಸನ ಸಂಸದ ಪೆನ್ ಡ್ರೈವ್ ಬಿಡುಗಡೆ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ ವಿಚಾರದಲ್ಲಿರಾಜ್ಯ ಸರ್ಕಾರದ ಡಿಕೆ ಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬೃಹತ್ ಪ್ರತಿಭಟನೆ ಮಾಡಿದರು.
ಏನೇ ಆಗಲಿ ತಪ್ಪು ಮಾಡಿದ್ರೆ ಪ್ರಜ್ವಲ್ ರೇವಣ್ಣ ಮೇಲೆ ನಿರ್ಧಾಕ್ಷಿಣ ಕ್ರಮವಾಗಲಿ ಪೆನ್ ಡ್ರೈ ಬಿಡುಗಡೆ ಮಾಡಿ, ಮಹಿಳೆಯರ ಮಾನಹಾನಿ ಮಾಡಿದವರ ಮೇಲೆ ಕೂಡಲೇ ಕಾನೂನು ಕ್ರಮಜರುಗಿಸಬೇಕು ಹಾಸನ ಪೆನ್ ಡ್ರೈವ್ ಪ್ರಕರಣವನ್ನ ಸಿಬಿಐ ಗೆ ವಹಿಸಬೇಕು,ನೂರಾರು ಜೆಡಿಎಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.