ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ದಿನೇದಿನೇ ಹೊಸ ರೂಪ ಪಡೆದು ಕೊಳ್ಳುತ್ತಿದೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಏಪ್ರಿಲ್ 29 ರಂದು ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ. ಆದ್ರೆ ಇದುವರೆಗೂ ಸಹ ಅವರು ಎಲ್ಲಿದ್ದಾರೆ ಎಂಬುದರ ಬಗ್ಗೆ ನಿಖರವಾದ ಮಾಹಿತಿ ಇಲ್ಲ. ಪ್ರಜ್ವಲ್ಗಾಗಿ ಎಸ್ಐಟಿ (SIT) ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪ್ರಜ್ವಲ್ ರೇವಣ್ಣ ಅವರು ಪ್ರಮುಖ ಆರೋಪಿ, ಅವರು ದೇಶ ಬಿಟ್ಟು ಹೋಗಿದ್ದಾರೆ. ಹಾಸನ ಜಿಲ್ಲೆಯ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎಸ್ಐಟಿ ಗಂಭಿರವಾಗಿ ಪರಿಗಣಿಸಿದೆ. ಅವರನ್ನ ವಾಪಸ್ ಕರೆತರಲು ಸಿಬಿಐಗೆ ಬ್ಲೂ ಕಾರ್ನರ್ ನೋಟಿಸ್ ನೀಡಬೇಕೆಂದು ಎಸ್ಐಟಿಯವರು ಮನವಿ ಮಾಡಿದ್ರು. ಅಂತೆಯೇ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. 197 ದೇಶಗಳಲ್ಲಿ ಇಂಟರ್ ಪೋಲ್ ನಿಂದ ಬ್ಲೂ ಕಾರ್ನರ್ ನೋಟಿಸ್ ಹೋಗಿದೆ ಎಂದು ತಿಳಿಸಿದರು.