ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿದ ಆರೋಪ ಹೊತ್ತಿರುವ ಸಂಸದರ ಮಾಜಿ ಕಾರು ಚಾಲಕ ಕಾರ್ತಿಕ್ ಸೇರಿದಂತೆ ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಾಸನ ನಗರದ ಮೂರನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಶರು ವಜಾಗೊಳಿಸಿದ್ದಾರೆ.
ಕಾರ್ತಿಕ್, ಹೊಳೆನರಸೀಪುರದ ಪುಟ್ಟರಾಜ್ ಅಲಿಯಾಸ್ ಪುಟ್ಟಿ, ಚೇತನ್, ಬೇಲೂರು ಮೂಲದ ನವೀನ್ ಗೌಡ ಹಾಗೂ ಹಾಸನದ ಕ್ವಾಲಿಟಿ ಬಾರ್ ಶರತ್ ಸೇರಿ ಐವರ ವಿರುದ್ಧ ಏಪ್ರಿಲ್ 23 ರಂದು ಹಾಸನ ನಗರದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಶ್ಲೀಲ ದೃಶ್ಯಾವಳಿಗಳು ಎಲ್ಲೆಡೆ ಹರಿದಾಡಿದ ನಂತರ ಪೆನ್ ಡ್ರೈವ್ ವೈರಲ್ ಆಗಲು ಇವರೇ ಕಾರಣ ಎಂದು ಆರು ಜನರ ವಿರುದ್ಧ ಜೆಡಿಎಸ್ ಜಿಲ್ಲಾ ಚುನಾವಣಾ ಏಜೆಂಟ್ ಪೂರ್ಣ ಚಂದ್ರ ತೇಜಸ್ವಿ ದೂರು ನೀಡಿದ್ದರು.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ನವೀನ್ ಗೌಡ ಮತ್ತು ಇತರರ ವಿರುದ್ಧ ದೂರು ದಾಖಲಾಗಿತ್ತು. ಬಳಿಕ ಕಾರ್ತಿಕ್, ಪುಟ್ಟರಾಜ್, ಚೇತನ್ ಹಾಗೂ ಇತರರು ನಿರೀಕ್ಷಣಾ ಜಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಹಾಸನದ ಮೂರನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಮೇ 8 ರಂದು ಜಾಮೀನು ಅರ್ಜಿ ತಿರಸ್ಕಾರ ಮಾಡಿದೆ ಎಂದು ವಕೀಲ ಪೂರ್ಣ ಚಂದ್ರ ತೇಜಸ್ವಿ ತಿಳಿಸಿದರು.