ಬೆಂಗಳೂರು: ಹೆಚ್. ಡಿ. ರೇವಣ್ಣಗೆ ನಾಲ್ಕು ದಿನಗಳ ಎಸೈಟಿ ಕಸ್ಟಡಿ ಡ್ರಿಲ್ ಮುಕ್ತಾಯವಾಗಿದೆ..ಜಾಮೀನಿಗೆ ಎಷ್ಟೇ ಹರಸಾಹಸ ಮಾಡಿದ್ರು ಸಿಗಲಿಲ್ಲ.ರೇವಣ್ಣಗೆ ಜೈಲಿಗೋಗದನ್ನ ತಪ್ಪಿಸಲು ಸಾಧ್ಯವೇ ಆಗಲಿಲ್ಲ.. ಇದರ ಮದ್ಯೆ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು, ಇಬ್ಬರು ಸರಕಾರಿ ಅಧಿಕಾರಿಗಳೂ ಸೇರಿ ಈವರೆಗೆ 9 ಮಂದಿ ಸಂತ್ರಸ್ತೆಯರನ್ನು ಗುರುತಿಸಿ ವಿಚಾರಣೆ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದ ಪ್ರಜ್ವಲ್ರ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಆಧರಿಸಿ ಸಂತ್ರಸ್ತೆಯರನ್ನು ಪತ್ತೆ ಮಾಡಿ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತೆಯರ ಪೈಕಿ ಇಬ್ಬರು ಸರಕಾರಿ ಅಧಿಕಾರಿಗಳು ಸಹ ವಿಚಾರಣೆಗೆ ಹಾಜರಾಗಿ, ಪ್ರಜ್ವಲ್ರ ಲೈಂಗಿಕ ದೌರ್ಜನ್ಯದ ಸಂಬಂಧ ಹೇಳಿಕೆ ಕೊಟ್ಟಿದ್ದಾರೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ವಿಚಾರಣೆ ವೇಳೆ ಸಂತ್ರಸ್ತೆಯರು ಪ್ರಜ್ವಲ್ಗೆ ಹೇಗೆ ಪರಿಚಿತರಾದರು ಎಂಬ ಬಗ್ಗೆ ತಿಳಿಸಿದ್ದಾರೆ. ಸಂತ್ರಸ್ತೆಯರ ಹೇಳಿಕೆ ಮಾತ್ರ ದಾಖಲಿಸಿಕೊಂಡಿದ್ದು, ಯಾವುದೇ ಮರುಪ್ರಶ್ನೆ ಮಾಡಿಲ್ಲ. ಮೂರು ವರ್ಷಗಳ ಅವಧಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತೆಯರು ಹೇಳಿದ್ದಾರೆ. ಸಂತ್ರಸ್ತೆಯರ ಹೇಳಿಕೆ ಆಧರಿಸಿ, ಸ್ಥಳ ಮಹಜರು ನಡೆಸಲು ನಿರ್ಧರಿಸಲಾಗಿದೆ ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ಸ್ಥಳೀಯ ಸಂಸ್ಥೆಗಳ ಕೆಲ ಮಹಿಳಾ ಜನಪ್ರತಿನಿಧಿಗಳು ಸಹ ಸಂತ್ರಸ್ತೆಯರಾಗಿದ್ದಾರೆ. ಪ್ರಜ್ವಲ್ ಅವರು ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸುವ ಹಾಗೂ ಅನುದಾನ ಕೊಡುವ ನೆಪದಲ್ಲಿ ತಮ್ಮನ್ನು ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆ ಮಹಿಳಾ ಜನಪ್ರತಿನಿಧಿಗಳು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಕ್ಷದ ಕೆಲ ಕಾರ್ಯಕರ್ತೆಯರು ವೈಯಕ್ತಿಕ ಕೆಲಸ ಕಾರ್ಯಗಳಿಗೆ ಪ್ರಜ್ವಲ್ರನ್ನು ಭೇಟಿ ಮಾಡಿದ್ದು, ಅವರ ಮೇಲೂ ಲೈಂಗಿಕ ದೌರ್ಜನ್ಯ ನಡೆದಿದೆ. ಕೆಲ ಮಹಿಳೆಯರಿಗೆ ಪ್ರಜ್ವಲ್ ಅವರು ಕಾಮಗಾರಿಗಳ ಗುತ್ತಿಗೆ ಕೊಡಿಸುವುದಾಗಿ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿರುವುದು ವಿಚಾರಣೆ ವೇಳೆ ಬಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.