ಬೆಂಗಳೂರು: ಹಾಸನದಲ್ಲಿ ಹಂಚಿಕೆಯಾಗಿದ್ದ ಅಶ್ಲೀಲ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 3 ಮಂದಿಯನ್ನು ಬಂಧನ ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬರುವವರೆಗೂ ತೀವ್ರಗತಿಯ ವಿಚಾರಣೆ ಕಷ್ಟ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದು,
ನಮ್ಮ ದೇಶದ ತನಿಖಾ ಸಂಸ್ಥೆಗಳಿಗೆ ಮಾಹಿತಿ ನೀಡಲಿದ್ದಾರೆ ಎಂದರು. “ಸದ್ಯ ಬಂಧನದಲ್ಲಿರುವ ಮಾಜಿ ಸಚಿವ ಎಚ್ಡಿ ರೇವಣ್ಣ ಅವರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ದೂರುದಾರರಿಂದಲೂ ಮಾಹಿತಿಗಳನ್ನು ಸಂಗ್ರಹ ಮಾಡುವ ಕೆಲಸ ಆಗುತ್ತಿದೆ. ಹೀಗಿರುವಾಗ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಛಿಯಲ್ಲಿ, ‘ಎಸ್ಐಟಿ ಸಮರ್ಥವಲ್ಲ ಹಾಗಾಗಿ ಸಿಬಿಐಗೆ ನೀಡಬೇಕು’ ಎಂದಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದವರು. ಎಸ್ಐಟಿ ಕಾರ್ಯವೈಖರಿ ಅವರಿಗೂ ಗೊತ್ತಿರುತ್ತದೆ,” ಎಂದು ತಿರುಗೇಟು ನೀಡಿದರು.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ನಮ್ಮ ಪೋಲೀಸರು ಸಮರ್ಥರಿದ್ದಾರೆ. ತನಿಖೆ ಸರಿಯಾದ ದಾರಿಯಲ್ಲಿ ಸಾಗುತ್ತಿದೆ. ಹೀಗಾಗಿ ಸಿಬಿಐ ಅಗತ್ಯವಿಲ್ಲ. ಹಿಂದಿನ ಸರ್ಕಾರ ಯಾವುದೇ ಪ್ರಕರಣವನ್ನು ಸಿಬಿಐಗೆ ನೀಡಿಲ್ಲ. ಡಿಕೆ ರವಿ ಪ್ರಕರಣದ ತನಿಖೆಯನ್ನ ಸಿಬಿಐಗೆ ನೀಡಿದಾಗ, ವರದಿ ಬಂದ ನಂತರ ಹಲವರು ಆಕ್ಷೇಪ ವ್ಯಕ್ತಪಡಿಸಿದರು. ಹೀಗಾಗಿ ನಮ್ಮ ಎಸ್ಐಟಿ ಸಮರ್ಥವಾಗಿದೆ. ನಮ್ಮ ಪೋಲೀಸರ ಮೇಲೆ ವಿಶ್ವಾಸವಿಡೋಣ ಎಂದು ಅವರು ಹೇಳಿದರು.