ಬಾಗಲಕೋಟೆ:- 12ನೇ ಶತಮಾನದಲ್ಲಿ ಕರುನಾಡಿನ ಬಿಜಾಪೂರು ಜಿಲ್ಲೆಯ ಬಾಗೆವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಬ್ರಾಹ್ಮಣ ಕುಲದ ಮಾದರಸ ಮಾದಲಾಂಬಿಕೆ ಇವರ ಉದರದಲ್ಲಿ ಜನಿಸಿದ ಮಾನವ ಬಸವಣ್ಣ.
ನಾಲ್ಕು ಕಾಲಿನ, ಒಂದು ಬಾಲದ, ಎರಡು ಕೋಡಿನ, ಗರ್ಭ ಗುಡಿಯ ಎದುರಿಗೆ ಕೂಡಿಸಿದ ನಂದಿ(ಎತ್ತು) ಅಲ್ಲ ಸರ್ವ ರಂಗದಲ್ಲಿಯೂ ಸಮಾನತೆಯನ್ನು ತಂದು ಮನುಷತ್ವವನ್ನು ಎತ್ತಿ ಹಿಡಿದವರು.
ಶತ ಶತಮಾನಗಳ ಕಾಲ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ದಾಸ್ಯಕ್ಕೆ ಒಳಗಾಗಿದ್ದ ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಸ್ತ್ರೀಕುಲೋದ್ಧಾರು
ಶತ ಶತಮಾನಗಳ ಕಾಲ ಯಾರನ್ನು ಗೆಲ್ಲಲು ಸಾಧ್ಯವಾಗಿದ್ದಿಲ್ಲವೋ ಅಂತಹ ಶೊಷಣೆಗಾಗಿದ್ದವರ ಮನಸ್ಸು, ಹೃದಯವನ್ನು ಗೆದ್ದು ಅವರನ್ನೂ ತನ್ನಂತೆ ಕಂಡು ಮಾದಾರನ ಮಗ ಎಂದು ಕರೆದುಕೊಂಡ ಸಮತಾವಾದಿ
_ಯಜ್ಞ-ಯಾಗ ಹೋಮ-ಹವನ ಮಾಡಿ ಲಕ್ಷಾಂತರ ಬೆಲೆ ಬಾಳುವ ವಸ್ತುಗಳನ್ನು ಸುಟ್ಟು, ಮುಗ್ದ ಜೀವಗಳನ್ನು ಆಹುತಿ ಮಾಡಿ, ಗುಡಿ ಗುಂಡಾರಗಳನ್ನು ಕಟ್ಟಿ, ಧಾರ್ಮಿಕ ಶೋಷಣೆ ನಡೆಸುತ್ತಿದ್ದವರ ವಿರುದ್ಧ ಬಂಡೆದ್ದು ಧಾರ್ಮಿಕ ಶೋಷಣೆ ನಿಲ್ಲಿಸಿದರು.
ನಿಮ್ನ ವರ್ಗದವರಿಗೆ ದೇವಸ್ಥಾನಗಳಲ್ಲಿ ಬಿಟ್ಟುಕೊಳ್ಳದಾದಾಗ ದೇವಸ್ಥಾನಗಳಿಗೆ ಧಿಕ್ಕಾರ ಹಾಕಿ,_ _ಮಾನವರಿಗೆ ಪ್ರವೇಶವಿಲ್ಲದ ಗುಡಿಯಲ್ಲಿ ದೇವರು ಇರುವುದಿಲ್ಲ ಬದಲಿಗೆ ದೇಹವೇ ದೇಗುಲ ಎಂದು ಸಾರಿ
ಅಂಗದ ಮೇಲೆ ಇಷ್ಟಲಿಂಗವನ್ನು ನೀಡಿ, ನಿಮ್ನ ವರ್ಗದವರನ್ನು ಲಿಂಗಾಯತರನ್ನಾಗಿ ಮಾಡಿ ನೂತನ ಲಿಂಗಾಯತ ಧರ್ಮ ಸ್ಥಾಪಿಸಿದ ಧರ್ಮ ಪ್ರವರ್ತಕ ಬಸವಣ್ಣನವರು.
ವಿಶ್ವದಲ್ಲಿ ಮೊದಲ ಸಾರ್ವಜನಿಕ ಶಿಕ್ಷಣವನ್ನು ಜಾರಿಗೆ ತಂದು ಅನುಭವ ಮಂಟಪದಲ್ಲಿ ಕಾರ್ಯಗತಗೊಳಿಸಿ, ಅನಕ್ಷರಸ್ತರನ್ನು ಅಕ್ಷರಸ್ತರನ್ನಾಗಿ ಮಾಡಿದ ಶಿಕ್ಷಣ ಕ್ರಾಂತಿಯ ಹರಿಕಾರ ಬಸವಣ್ಣ
ಬಸವಣ್ಣ ಎಂದರೆ; ನಮ್ಮೊಳಗಿನ ಅರಿವಿನ ಪ್ರಜ್ಞೆ. ಬಸವಣ್ಣ ಎಂದರೆ; ದಣಿವರಿಯದ ಬದುಕು. ಬಸವಣ್ಣ ಎಂದರೆ; ಸಾಮರಸ್ಯ. ಬಸವಣ್ಣ ಎಂದರೆ; ಸಹೋದರತೆ. ಬಸವಣ್ಣ ಎಂದರೆ; ಮಹಾ ಬೆಳಗು. ಬಸವಣ್ಣ ಎಂದರೆ; ಮಹಾ ಬಯಲು. ಬಸವಣ್ಣ ಎಂದರೆ; ಮಡಿ ಮೈಲಿಗೆ ಇಲ್ಲದ ವಾತ್ಸಲ್ಯದ ಮಡಿಲು. ಬಸವಣ್ಣ ಎಂದರೆ; ಸಾವು ಕೇಡಿಲ್ಲದ ಶಾಂತ-ಪ್ರಶಾಂತ-ಸಮಚಿತ್ತ-ಸಮಕಳೆಸಮಭಾವ-ಸಮಗಾರ ಎಂದು ಹೇಳಿದರು
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ವಿರಕ್ತಮಠದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಸಿದ್ದರಾಮೇಶ್ವರ ಮಹಾಸ್ವಾಮಿಗಳು. ನಿಲ್ಲ ವಿಜಯ ಮಹಾಂತೇಶವರ ತಾಯಿ. ಈರಣ್ಣ ಗುಣಕಿ. ಎಮ್ ಬಿ ನಾಶಿ. ರಾಜು ಸಾಬೂಜಿ. ಸಂಗಯ್ಯ ಅಮ್ಮಣಗಿಮಠ. ಸಂಜಯ ಅಮ್ಮನಿಗಿಮಠ. ಬಾಬು ಮಹಾಜನ. ರಮೇಶ ನಂದಗಾವಕರ. ಗಿರೀಶ್ ಮುತ್ತೂರ. ಪ್ರಕಾಶ ಸಮಗಾರ. ಸಾಗರ ನಿಪ್ಪಾಣಿ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ