ನವದೆಹಲಿ:- ನರೇಂದ್ರ ದಾಭೋಲ್ಕರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ 11 ವರ್ಷಗಳ ನಂತರ ನ್ಯಾಯಾಲಯ ತೀರ್ಪು ನೀಡಿದೆ.
ಪಂಜಾಬ್ ಆಟಗಾರನ ಆ್ಯಕ್ಷನ್ ಗೆ ಕೊಹ್ಲಿ ಖಡಕ್ ರಿಯಾಕ್ಷನ್.. ಅಲ್ಲೇ ಡ್ರಾ ಅಲ್ಲೇ ಬಹುಮಾನ ಎಂದ ಕಿಂಗ್ ಫ್ಯಾನ್ಸ್..!
ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಮೂವರು ಖುಲಾಸೆಗೊಂಡಿದೆ. ಸಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನ ಸಮಿತಿಯ ಮುಖ್ಯಸ್ಥ ನರೇಂದ್ರ ದಾಭೋಲ್ಕರ್ ಅವರನ್ನು 20 ಆಗಸ್ಟ್ 2013 ರಂದು ಪುಣೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು
ಪುಣೆಯಲ್ಲಿ ದಾಭೋಲ್ಕರ್ ಹತ್ಯೆಯ ನಂತರ, ಫೆಬ್ರವರಿ 2015 ರಲ್ಲಿ ಗೋವಿಂದ್ ಪನ್ಸಾರೆ ಮತ್ತು ಅದೇ ವರ್ಷ ಆಗಸ್ಟ್ನಲ್ಲಿ ಕೊಲ್ಲಾಪುರದಲ್ಲಿ ಎಂಎಂ ಕಲಬುರ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದಲ್ಲದೆ, ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 2017 ರಲ್ಲಿ ಬೆಂಗಳೂರಿನ ತಮ್ಮ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿತ್ತು. ಬಾಂಬೆ ಹೈಕೋರ್ಟಿನ ಆದೇಶದ ನಂತರ 2014 ರಲ್ಲಿ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ( ಸಿಬಿಐ) ತನಿಖೆಯನ್ನು ವಹಿಸಿಕೊಂಡಿತು ಮತ್ತು ಜೂನ್ 2016 ರಲ್ಲಿ ಹಿಂದೂ ಬಲಪಂಥೀಯ ಸಂಘಟನೆಯಾದ ಸನಾತನ ಸಂಸ್ಥೆಗೆ ಸಂಬಂಧಿಸಿದ ಇಎನ್ಟಿ ಶಸ್ತ್ರಚಿಕಿತ್ಸಕ ಡಾ.ವೀರೇಂದ್ರ ಸಿಂಗ್ ತಾವ್ಡೆ ಅವರನ್ನು ಬಂಧಿಸಿತು. ಪ್ರಾಸಿಕ್ಯೂಷನ್ ಪ್ರಕಾರ, ತಾವಡೆ ಕೊಲೆಯ ಮಾಸ್ಟರ್ಮೈಂಡ್ಗಳಲ್ಲಿ ಒಬ್ಬರು. ನರೇಂದ್ರ ದಾಭೋಲ್ಕರ್ ಮಹಾರಾಷ್ಟ್ರದ ಸಾಮಾಜಿಕ ಕಾರ್ಯಕರ್ತರಾಗಿದ್ದರು. 1 ನವೆಂಬರ್ 1945 ರಂದು ಜನಿಸಿದ ಅವರು ಗಾಂಧಿವಾದಿ ಸಮಾಜವಾದಿ ದೇವದತ್ತ್ ದಾಭೋಲ್ಕರ್ ಅವರ ಕಿರಿಯ ಸಹೋದರರಾಗಿದ್ದರು ಎನ್ನಲಾಗಿದೆ.