ಬೆಂಗಳೂರು:- ನಗರದ ಪೀಣ್ಯ, ದಾಸರಹಳ್ಳಿ, ಮಲ್ಲಸಂದ್ರ, ಮಾಕಳಿ, ಚಿಕ್ಕಬಿದರಕಲ್ಲು ಸೇರಿದಂತೆ ಹಲವೆಡೆ ಮಳೆ ಆರಂಭವಾಗಿದೆ. ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಳೆಯಾಗುವ ಸಾಧ್ಯತೆಗಳಿವೆ.
ಮಾತೃಭಾಷೆ ಉರ್ದು, ಸಂಸ್ಕೃತದಲ್ಲಿ ಟಾಪರ್.. ಮುಸ್ಲಿಂ ಬಾಲಕನ ಸಾಧನೆಗೆ ವ್ಯಾಪಕ ಮೆಚ್ಚುಗೆ!
ಇನ್ನು ಮಳೆಯಿಂದ ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಸಂಚಾರ ವ್ಯತ್ಯಯವಾಗಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಂದಗತಿಯಲ್ಲಿ ವಾಹನಗಳು ಸಂಚಾರ ನಡೆಸುತ್ತಿವೆ. ಈ ಹಿನ್ನಲೆ 8ನೇ ಮೈಲಿ ನವಯುಗ ಟೋಲ್ನಿಂದ ಮಾದವಾರವರೆಗೆ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ ಎನ್ನಲಾಗಿದೆ.