ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಮಳೆ ನಗರದ ಹಲವೆಡೆ ಅವಾಂತರ ತಂದಿಟ್ಟಿದೆ.
ಕೆಆರ್ ಮಾರುಕಟ್ಟೆ, ಜೆಸಿ ರಸ್ತೆ, ಮೆಜೆಸ್ಟಿಕ್, ಗಿರಿನಗರ, ಶ್ರೀನಿವಾಸನಗರ, ಹೊಸಕೆರೆಹಳ್ಳಿ, ರಾಜರಾಜೇಶ್ವರಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಗುಡುಗು, ಸಹಿತ ಮಳೆಯಿಂದಾಗಿ ಕೆಲ ಏರಿಯಾಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಗಿದೆ. ಭಾನುವಾರ ರಾತ್ರಿಯೂ ರಾಜರಾಜೇಶ್ವರಿ ನಗರ ಗೇಟ್ಬಳಿಯ ರಸ್ತೆ ಜಲಾವೃತವಾಗಿ ವಾಹನ ಸವಾರರು ಪರತಪಿಸುವಂತಾಯಿತು.
IPL 2024: ಆರ್ ಸಿಬಿಗೆ ಸತತ 5 ನೇ ಗೆಲುವು.. ನಾಯಕ ಫಾಫ್ ಹೇಳಿದ್ದು ಹೀಗೆ!
ಇನ್ನೂ ರಾಜ್ಯದ ವಿವಿಧೆಡೆ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ, ದಕ್ಷಿಣ, ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೇ 15ರ ವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿ