ಇಂದಿನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮುಂಬರುವ ಪಂದ್ಯಕ್ಕಾಗಿ KL ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದೊಂದಿಗೆ ದೆಹಲಿಗೆ ಪ್ರಯಾಣಿಸಿಲ್ಲ ಎಂದು ವರದಿಯಾಗಿದೆ.
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ ಗಜರಾಜನ ದರ್ಶನ.. ಬೆಚ್ಚಿಬಿದ್ದ ಜನತೆ..!
ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಡಲಿದೆ. ಅದರಲ್ಲಿಯೂ ಈ ಎರಡೂ ತಂಡಗಳು ಇನ್ನೂ ಐಪಿಎಲ್ 2024ರ ಪ್ಲೇಆಫ್ ಲೆಕ್ಕಾಚಾರದಲ್ಲಿದೆ. ಹೀಗಾಗಿ ಈ ಪಂದ್ಯ ಗೆದ್ದ ತಂಡದ ಪ್ಲೇಆಫ್ ಆಸೆ ಜೀವಂತವಾಗಿರಲಿದೆ. ಸೋತರೆ ಬಹುತೇಕ ಟೂರ್ನಿಯಿಂದ ಹೊರಬೀಳಲಿದೆ. ಈಗಾಗಲೇ ಡೆಲ್ಲಿ ಆಡಿರುವ 13 ಪಂದ್ಯಗಳಲ್ಲಿ 6ರಲ್ಲಿ ಗೆದ್ದು ಏಳರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಏತನ್ಮಧ್ಯೆ, ಲಕ್ನೋ ಆಡಿದ 12 ಪಂದ್ಯಗಳಲ್ಲಿ ಆರರಲ್ಲಿ ಗೆದ್ದಿದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇದರಿಂದಾಗಿ ಈ ಎರಡೂ ತಂಡಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲಿಯೂ ಕೆಎಲ್ ರಾಹುಲ್ಗೆ ಈ ಪಂದ್ಯ ಮಹತ್ವದ್ದಾಗಿದೆ. ಇದರ ನಡುವೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದ್ದು ದೊಡ್ಡಮಟ್ಟದ ಚರ್ಚೆಗೆ ಕಾರಣವಾಗಿದೆ. ಹೌದು, ಮೇ 14ರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮುಂಬರುವ ಪಂದ್ಯಕ್ಕಾಗಿ KL ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದೊಂದಿಗೆ ದೆಹಲಿಗೆ ಪ್ರಯಾಣಿಸಿಲ್ಲ ಎಂದು ವರದಿಯಾಗಿದೆ. ಆದಾಗ್ಯೂ, ಅವರು ನೇರವಾಗಿ ತಂಡದ ಜೊತೆ ಸೇರಲು ಇನ್ನೂ ಅವಕಾಶವಿದೆ.
ಆದರೆ ತಂಡದ ಪ್ರಯಾಣದ ಜೊತೆಗೆ ಕೆಎಲ್ ರಾಹುಲ್ ಏಕೆ ಪ್ರಯಾಣಿಸಲಿಲ್ಲ ಎನ್ನುವುದೇ ದೊಡ್ಡ ಚರ್ಚೆಗೆ ಕಾರಣವಾಗಿದೆ. ಲಕ್ನೋದ ಹಿಂದಿನ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧದ ಹೀನಾಯ ಸೋಲಿನ ನಂತರ. ಕೆಎಲ್ ರಾಹುಲ್ ಅವರು ಡಗೌಟ್ನಲ್ಲಿ ಎಲ್ಎಸ್ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರೊಂದಿಗಿನ ಚರ್ಚೆಯ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.ಇದರ ಪರಿಣಾಮವಾಗಿ ರಾಹುಲ್ ಲಕ್ನೋ ತಂಡವನ್ನು ಬಿಟ್ಟು ಹೊರಬರಬೇಕು ಎಂಬ ಮಾತುಗಳೂ ಸಹ ಕೇಳಿಬಂದಿದ್ದವು. ಅಲ್ಲದೇ ಅನೇಕ ಹಿರಿಯ ಆಟಗಾರರರು ಹಾಗೂ ಅಭಿಮಾನಿಗಳು ಈ ವಿಚಾರವಾಗಿ ಕೆಎಲ್ ರಾಹುಲ್ ಪರ ನಿಂತಿದ್ದರು. ಅಲ್ಲದೇ ಇದರ ನಡುವೆ ರಾಹುಲ್ ನಾಯಕತ್ವದ ಪಾತ್ರದ ಬಗ್ಗೆ ಊಹಾಪೋಹಗಳು ಹುಟ್ಟಿಕೊಂಡಿದ್ದವು. ಅದಕ್ಕೆ ಪುಷ್ಠಿ ನೀಡುವಂತೆ ಇದೀಗ ರಾಹುಲ್ ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಲಕ್ನೋ ತಂಡದ ಜೊತೆಗೆ ಪ್ರಯಾಣಿಸದಿರುವುದು ಹೊಸ ವಿಚಾರಕ್ಕೆ ಮುನ್ನುಡಿಯಾಗಿದೆ.