ಬೆಂಗಳೂರು:– ಕರ್ನಾಟಕದ ಹಲವೆಡೆ ಗುಡುಗು, ಗಾಳಿ ಸಹಿತ ವರುಣದೇವ ಅಬ್ಬರಿಸಿದ್ದಾನೆ.
ಸಾಮಾನ್ಯವಾಗಿ ನೈಋತ್ಯ ಮುಂಗಾರು ಭಾರತವನ್ನು ಮೇ 22 ರ ಸಮಯದಲ್ಲಿ ಪ್ರವೇಶಿಸುತ್ತಿತ್ತು. ಆದರೆ ಈ ವರ್ಷ ಮೂರು ದಿನ ಮುಂಚಿತವಾಗಿ ಮುಂಗಾರು ಮಳೆ ದೇಶಕ್ಕೆ ಎಂಟ್ರಿ ನೀಡಲಿದೆ.
ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಿಗೆ ಶಾಕ್ ಕೊಟ್ಟ ಎಸ್ಐಟಿ… ಬಾರ್, ಹೋಟೆಲ್ ಪರಿಶೀಲನೆ!
ಇತ್ತ ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಶೃಂಗೇರಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಮಳೆ ಅಡಿಕೆ-ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ತುಂಗಾ ನದಿ ಹರಿವಿನಲ್ಲಿ ಕೊಂಚ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಲೆನಾಡಿನಲ್ಲಿ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಭಾರೀ ಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆ ಬಿಸಿಲಿಗೆ ಕಾದಿದ್ದ ಇಳೆಗೆ ತಂಪೆರೆದಿದೆ. ಬೇಸಿಗೆ ಬಿಸಿಗೆ ಬಸವಳಿದಿದ್ದ ಕರಾವಳಿ ಜನತೆಗೆ ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆ ಖುಷಿಕೊಟ್ಟಿದೆ. ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರ ಸುಮಾರಿಗೆ ಕೇರಳವನ್ನು ಪ್ರವೇಶಿಸುತ್ತದೆ. ಅದರ ನಂತರ ಉತ್ತರಾಭಿಮುಖವಾಗಿ ಮುಂದುವರಿಯುತ್ತದೆ. ಸಾಮಾನ್ಯವಾಗಿ ತನ್ನ ಉಚ್ಛ್ರಾಯದ ಹಂತದಲ್ಲಿ ಜುಲೈ 15 ರ ಸುಮಾರಿಗೆ ಇಡೀ ದೇಶವನ್ನು ಆವರಿಸುತ್ತದೆ.
ಈ ವರ್ಷದ ಜೂನ್ ತಿಂಗಳಿನಿಂದ ಸೆಪ್ಟೆಂಬರ್ ನಡುವೆ ದೇಶದಾದ್ಯಂತ ಮಾನ್ಸೂನ್ ಮಳೆಯು ದೀರ್ಘಾವಧಿಯ ಸರಾಸರಿ ಸಾಮಾನ್ಯಕ್ಕಿಂತ ಹೆಚ್ಚು ಆಗಿರಬಹುದು ಎಂದು IMD ಏಪ್ರಿಲ್ನಲ್ಲಿ ತನ್ನ ದೀರ್ಘ ಶ್ರೇಣಿಯ ಮುನ್ಸೂಚನೆಯಲ್ಲಿ ತಿಳಿಸಿದೆ.