ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆಯ ಕಹಿ ನೆನಪು ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಅಂಥದ್ದೇ ಮತ್ತೊಂದು ಘಟನೆ ನಡೆದಿದೆ. ನಸುಕಿನ ಜಾವ ನಸುನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಹತ್ಯೆ ಮಾಡಿದ ಭೀಕರ ಘಟನೆಗೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿ ಸಾಕ್ಷಿಯಾಗಿದೆ. ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು ಗುರುತಿಸಲಾಗಿದೆ. ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಈ ಯುವತಿಯನ್ನು ಹತ್ಯೆ ಮಾಡಿದ್ದು, ನಂತರ ತಲೆಮರೆಸಿಕೊಂಡಿದ್ದಾನೆ. ಏನೇನಾಯಿತು ನೋಡಿ..
ಹುಬ್ಬಳ್ಳಿಯಲ್ಲಿ ಕೊಲೆಗಳು ಹೆಚ್ಚಾಗುತಿದ್ದು ಅದರಲ್ಲೂ ಪ್ರೀತಿ ಧ್ವೃಷ ಜಿಹಾದ್ ದಂತಹ ದುಷ್ಕರ್ತಕ್ಕೆ ಅಮಾಯಕ ಹೆಣ್ಣು ಮಕ್ಕಳು ಬಲಿಯಾಗತಾ ಇದ್ದಾರೆ . ನೇಹಾ ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಅಂಜಲಿ ಅಂಬಿಗೇರಗೆ ವಿಶ್ವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಅದರಂತೆಯೇ ಬುಧವಾರ ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹು-ಧಾ ಪ್ರಭಾರಿ ಪೊಲೀಸ್ ಕಮೀಷನರ್ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಹೇಳಿದ ಕೊಲೆಯಾದ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಈಗಾಗಲೇ ಆರೋಪಿ ಪತ್ತೆಗೆ ಬಲೆ ಬೀಸಲಾಗಿದೆ. ಯಾವ ಕಾರಣಕ್ಕೆ ಕೊಲೆಯಾಗಿದೆ ಎಂದು ತನಿಖೆಯಲ್ಲಿ ಗೊತ್ತಾಗಲಿದೆ. ಈಗಾಗಲೇ ತನಿಖೆ ಆರಂಭ ಮಾಡಿದ್ದೇವೆ. ಮುಂದಿನ ಮಾಹಿತಿಯನ್ನ ತನಿಖೆಯ ನಂತರ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಹೆಂಡತಿಯ ಪ್ರಜ್ಞೆ ತಪ್ಪಿಸಿ ಪರಪುರಷರಿಂದ ಅತ್ಯಾಚಾರ ಮಾಡಿಸ್ತಿದ್ದ ಪತಿ.! ಪಾಪಿ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ..?
ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಆದ ಹಾಗೆಯೇ ನಿನಗೂ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ. ಜತೆಗೆ, ಬೈಕ್ ಕಳ್ಳತನದಲ್ಲಿಯೂ ಆರೋಪಿಯಾಗಿದ್ದಾನೆ. ಮೂಢ ನಂಬಿಕೆ ಎಂದು ಕಳುಹಿಸಿದ್ದ ಪೊಲೀಸರು
ಆರೋಪಿ ವಿಶ್ವ ಅಂಜಲಿಗೆ ಧಮ್ಕಿ ಹಾಕಿರುವ ವಿಚಾರವಾಗಿ ಆಕೆಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಹೆಚ್ಚು ಪ್ರಾಶಸ್ತ್ಯ ನೀಡದ ಪೊಲೀಸರು, ಇದೆಲ್ಲ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರು. ಪರಿಣಾಮವಾಗಿ ಇದೀಗ ಮತ್ತೊಂದು ಕೊಲೆಯಾಗಿದೆ. ಮನೆಗೆ ನುಗ್ಗಿದ ವಿಶ್ವ ಅಂಜಲಿಯನ್ನು ಆಕೆಯ ಅಜ್ಜಿ ಹಾಗೂ ಇಬ್ಬರು ಸಹೋದರಿಯರ ಮುಂದೆಯೇ ಭೀಕರವಾಗಿ ಹತ್ಯೆ ಮಾಡಿದ್ದಾನೆ.
ಮನೆ ತುಂಬೆಲ್ಲಾ ಎಳೆದಾಡಿ ಚಾಕುವಿನಿಂದ ಇರಿದಿದ್ದಾನೆ. ಮೊದಲಿಗೆ ಮನೆಯ ಪಡಸಾಲಿಯಲ್ಲಿ ಅಂಜಲಿಗೆ ಚಾಕು ಹಾಕಿದ ವಿಶ್ವ, ಬಳಿಕ ಕುತ್ತಿಗೆ ಹಿಡಿದು ಗೋಡೆಯತ್ತ ಎಳೆದಕೊಂಡು ಹೋಗಿ ಹೊಟ್ಟೆ ಭಾಗಕ್ಕೆ ಚಾಕು ಹಾಕಿದ್ದಾನೆ. ಅಲ್ಲಿಂದ ಅಡುಗೆಯ ಮನೆಗೆ ಎಳೆದೊಯ್ದು ಮನ ಬಂದಂತೆ ಚಾಕು ಚುಚ್ಚಿದ್ದಾನೆ. ಅಂಜಲಿ ಕೊನೆಯುಸಿರೆಳೆದ ಬಳಿಕವೇ ಅಲ್ಲಿಂದ ಕಾಲ್ಕಿತ್ತಿದ್ದಾನೆ.ಕೊಲೆಯ ಬಗ್ಗೆ ಮೃತಳ ಸಹೋದರಿ ಪೂಜಾ ಮಾಹಿತಿ ನೀಡಿದ್ದು, ಬೆಳಗ್ಗೆ ಐದು ಗಂಟೆಗೆ ಮನೆಗೆ ಬಂದು ಹೊರಗಡೆ ಕರೆದಿದ್ದಾನೆ.
ಆಗ ನಮ್ಮ ಸಹೋದರಿ ಅಜ್ಜಿ, ತಂಗಿಯನ್ನು ಬಿಟ್ಟು ಬರುವದಿಲ್ಲ ಎಂದಿದ್ದಾಳೆ. ಆಗ ಚಾಕುವಿನಿಂದ ಕತ್ತು, ಎದೆ ಹಾಗೂ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದಳು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ, ವಿದ್ಯಾರ್ಥಿನಿ ನೇಹಾರನ್ನು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಏಪ್ರಿಲ್ 18ರಂದು ಚೂರಿಯಿಂದ ಹಲವು ಬಾರಿ ಇರಿದು ಹತ್ಯೆ ಮಾಡಲಾಗಿತ್ತು. ಘಟನೆ ರಾಜ್ಯದಾದ್ಯಂತ ರಾಜಕೀಯವಾಗಿಯೂ ಭಾರಿ ಸದ್ದು ಮಾಡಿತ್ತು. ಇದೀಗ ಅಂಥದ್ದೇ ಮತ್ತೊಂದು ಕೃತ್ಯ ನಡೆದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.