ಮಂಡ್ಯ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಜಲಾಶಯಗಳಿಗೆ ಒಳಹರಿವು ಅಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದರಿಂದ ಡ್ಯಾಂಗಳಲ್ಲಿ ನೀರಿನ ಪ್ರಮಾಣ ಅಲ್ಪ ಮಟ್ಟಿಗೆ ಏರಿಕೆ ಕಂಡಿದೆ. ಜಿಲ್ಲೆಯ ಕೆ.ಆರ್.ಎಸ್ ಜಲಾಶಯದ ಒಳ ಹರಿವಿನಲ್ಲಿ ಹೆಚ್ಚಳವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಕಳೆದ ನಾಲ್ಕೈದು ತಿಂಗಳಿಂದ ಒಳಹರಿವಿನ ಮಟ್ಟ ತೀವ್ರ ಕುಸಿತ ಕಂಡಿತ್ತು. 50 ಕ್ಯೂಸೆಕ್ಸ್ ಗೆ ಇಳಕೆ ಕಂಡು ಸಾಕಷ್ಟು ಆತಂಕ ಮೂಡಿಸಿತ್ತು.. ಕಾವೇರಿ ಜಲಾನಯನ ಪ್ರದೇಶದಲ್ಲಿ ಭರಣಿ ಮಳೆ ಅಬ್ಬರ ಹಿನ್ನಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ.ಆರ್.ಎಸ್ ಡ್ಯಾಂನಲ್ಲಿ ನೀರಿನ ಪ್ರಮಾಣ ಅಲ್ಪ ಮಟ್ಟಿಗೆ ಏರಿಕೆ ಕಂಡಿದೆ.