ಹಾವೇರಿ: ರಾಜ್ಯ ಸರಕಾರ ಕೇಂದ್ರ ಸರಕಾರ ನೀಡಿದ ಬರ ಪರಿಹಾರದಲ್ಲಿ 2 ಸಾವಿರ ಕಡಿತ ಮಾಡಿ ನೀಡುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರೈತರಿಗೆ ದೊಡ್ಡ ಅನ್ಯಾಯ ಮಾಡುತ್ತಿದೆ, ಬರ ಪರಿಹಾರವನ್ನ ಸಾಲಕ್ಕೆ ಹೊಂದಾಣಿಕೆ ಮಾಡುತ್ತಿದೆ. ರಾಜ್ಯ ಸರಕಾರ ಕೊಟ್ಟಿದ್ದೆ ಜುಜಬಿ 2 ಸಾವಿರ, ಅದನ್ನೇ ಕಟ್ ಮಾಡ್ತಿದಾರೆ ಎಂದು ಆರೋಪಿಸಿದ್ದಾರೆ.
ಇನ್ನೂ ಹುಬ್ಬಳ್ಳಿಯಲ್ಲಿ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಪ್ರತಿಕ್ರಿಯೇ ನೀಡಿದ್ದು, ಇದು ಕಾನೂನು ಸುವ್ಯವಸ್ಥೆ ಕುಸಿದಿದ್ದಕ್ಕೆ ಸಾಕ್ಷಿಯಾಗಿದೆ. ಯಾರೆ ಇರಲಿ ತಂದು ಗಲ್ಲಿಗೇರಿಸಿ, ಶಿಕ್ಷೆ ಕೊಡಿಸಿ, ಇದೊಂದು ಜನವಿರೋದಿ ಸರಕಾರ, ರಾಜ್ಯ ಸರಕಾರವೆ ಮುಂದೆ ನಿಂತು ಕುಮ್ಮಕ್ಕು ನಿಡೋದನ್ನ ನಾನು ನೋಡಿರಲಿಲ್ಲ ಎಂದು ಹೇಳಿದರು.