ಚಾಮರಾಜನಗರ:– ಗಡಿನಾಡು ಚಾಮರಾಜನಗರದಲ್ಲಿ ಶಿಕ್ಷಕರ ಕೊರತೆಯಿಂದ ಶೇ. 24ನೇ ಸ್ಥಾನಕ್ಕೆ ಕುಸಿತ ಕಂಡಿದೆ.
KIA ನಲ್ಲಿ ಕಾದು-ಕಾದು ಸುಸ್ತಾದ ಪೊಲೀಸರು..ಇಂದೂ ಬರಲಿಲ್ಲ ಪ್ರಜ್ವಲ್ ರೇವಣ್ಣ!
ಮೊದಲೇ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ಉತ್ತಮ ಕಲಿಕಾ ವಾತಾವರಣವಿಲ್ಲವೆಂದು ಖಾಸಗಿ ಶಾಲೆಗಳತ್ತ ಮುಖ ಮಾಡ್ತಿದ್ದಾರೆ. ಆದ್ರೂ ಶಿಕ್ಷಣ ಇಲಾಖೆ ಹಾಗೂ ಸರ್ಕಾರ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸದೆ ಇರುವುದರಿಂದ ಸಾರ್ವಜನಿಕ ವಲಯದಲ್ಲಿ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತವಾಗಿದೆ. ಚಾಮರಾಜನಗರದ ಪ್ರಾಥಮಿಕ ಹಾಗೂ ಫ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಜೊತೆಗೆ ಕೊಠಡಿಯ ಸಮಸ್ಯೆಯಿದ್ದು,ಕೊಠಡಿಗಳನ್ನು ದುರಸ್ತಿಗೊಳಿಸುವ ಕೆಲಸ ಆಗಬೇಕಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಸೃಷ್ಟಿಸಬೇಕಿದೆ. ಜಿಲ್ಲೆಯ ಪ್ರಾಥಮಿಕ ಶಾಲೆಗಳಲ್ಲಿ 2999 ಶಿಕ್ಷಕರ ಅಗತ್ಯವಿದೆ. ಆದರೆ ಸದ್ಯ 2076 ಶಿಕ್ಷಕರಿದ್ದು 923 ಶಿಕ್ಷಕರ ಹುದ್ದೆ ಖಾಲಿಯಿದೆ. ಅದಲ್ಲದೇ ಪ್ರೌಢಶಾಲೆಗಳಲ್ಲಿ 810 ಶಿಕ್ಷಕರ ಅಗತ್ಯವಿದೆ. ಆದರೆ 605 ಶಿಕ್ಷಕರಿದ್ದು 205 ಶಿಕ್ಷಕರ ಹುದ್ದೆ ಖಾಲಿಯಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
ಇನ್ನೂ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ಮೇಲೂ ಶಿಕ್ಷಕರ ಕೊರತೆ ಸಾಕಷ್ಟು ಪ್ರಭಾವ ಬೀರಿದೆ. ಕಳೆದ ಬಾರಿಯ 7 ನೇ ಸ್ಥಾನದಿಂದ 24 ನೇ ಸ್ಥಾನಕ್ಕೆ ಫಲಿತಾಂಶ ಕುಸಿದಿದೆ. ಪ್ರತಿ ಬಾರಿ ಶಿಕ್ಷಕರ ಕೊರತೆಯನ್ನು ಅತಿಥಿ ಶಿಕ್ಷಕರ ಮೂಲಕ ನೀಗಿಸಲು ಶಿಕ್ಷಣ ಇಲಾಖೆ ಮುಂದಾಗುತ್ತಿದೆ. ಅಗತ್ಯ ಸಂಖ್ಯೆಯ ಕಾಯಂ ಶಿಕ್ಷಕರನ್ನು ನೇಮಕ ಮಾಡದೆ ನಿರ್ಲಕ್ಷ ವಹಿಸಿದೆ. ಇನ್ನೊಂದೆಡೆ ಶಾಲಾ ಕೊಠಡಿಗಳು ದುರಸ್ತಿ ಮಾಡಬೇಕಿದೆ. ಬಳಸಲು ಯೋಗ್ಯವಲ್ಲದ ಸ್ಥಿತಿಯಲ್ಲಿ 257 ಕೊಠಡಿಗಳಿವೆ. ಅತ್ಯಗತ್ಯವಾಗಿ 97 ಕೊಠಡಿಗಳು ದುರಸ್ತಿ ಆಗಬೇಕಿದೆ