ಬೆಂಗಳೂರು: ಬೇಸಿಗೆ ಬಂತೆಂದರೆ ಬಿಸಿಲಿನ ತಾಪದಿಂದ ಪಾರಾಗಲು ತಣ್ಣನೆಯ ವಾತಾವರಣ ಅರಸಿ ಜನವಸತಿ ಪ್ರದೇಶಗಳತ್ತ ಹಾವುಗಳು ಬರುವುದು ಸಹಜ. ತಂಪು ವಾತಾವರಣ ಹರಸುತ್ತಾ ದೇಹವನ್ನು ಸಮತೋಲನದಲ್ಲಿ ಇರಿಸಿಕೊಳ್ಳಲು ಪ್ರಯತ್ನಿಸುತ್ತವೆ. ಆದ್ದರಿಂದಲೇ ಬೇಸಿಗೆ ಸಮಯದಲ್ಲಿ ಸಂದುಗಳನ್ನ ಹುಡುಕುತ್ತವೆ ಇದೇ ವೇಳೆ ಮನೆಗಳಿಗೂ ಬರಬಹುದು. ಇದರಿಂದ ಆತಂಕಗೊಳ್ಳುವ ಕೆಲವರು ಹಾವುಗಳನ್ನು ಹೊಡೆದು ಕೊಲ್ಲುತ್ತಾರೆ,
https://x.com/KarnatakaVarthe/status/1790692441139659028?ref_src=twsrc%5Etfw%7Ctwcamp%5Etweetembed%7Ctwterm%5E1790692441139659028%7Ctwgr%5E8329ec814a6f5f5175424611f92e2b0d640608af%7Ctwcon%5Es1_&ref_url=https%3A%2F%2Fpublictv.in%2Fcall-bbmp-helpline-for-snake-rescue%2F
ಇನ್ನೂ ಕೆಲವರು ಉರಗ ರಕ್ಷಕರಿಗೆ ತಿಳಿಸಿ ರಕ್ಷಣೆ ಮಾಡುತ್ತಾರೆ. ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯೂ ಹಾವುಗಳ ರಕ್ಷಣೆಗೆ ಮುಂದಾಗಿದೆ. ಮನೆಯ ಸುತ್ತಮುತ್ತ ಹಾವುಗಳು ಕಂಡರೆ ಅವುಗಳನ್ನು ರಕ್ಷಿಸಲು ಕೂಡಲೇ ಮಾಹಿತಿ ನೀಡುವಂತೆ ಸಹಾಯವಾಣಿ ಬಿಡುಗಡೆ ಮಾಡಿದೆ. ಈ ಕುರಿತು ಡಿಐಪಿಆರ್ ಕರ್ನಾಟಕ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನೂ ಹಂಚಿಕೊಂಡಿದೆ.
ಮೇ ತಿಂಗಳು ಉರಗಗಳ ಸಂತಾನೋತ್ಪತ್ತಿ ಸಮಯ. ಮುಖ್ಯವಾಗಿ ಸರ್ಪಗಳ ಮೊಟ್ಟೆಗಳು ಒಡೆದು ಮರಿಗಳು ಹೊರಬರುವ ಕಾಲವಾಗಿದೆ. ಈ ಸಮಯದಲ್ಲಿ ಹೆಚ್ಚು ಹಾವುಗಳು ಕಾಣಸಿಗುತ್ತದೆ. ಗಾಬರಿಗೊಳ್ಳದಿರಿ ಹಾಗೂ ಅದನ್ನು ಬಡಿದು ಕೊಲ್ಲದಿರಿ. ಹಾವುಗಳ ರಕ್ಷಣೆಗಾಗಿ ಬಿಬಿಎಂಪಿ ಸಹಾಯವಾಣಿ 9902794711 ಗೆ ಕರೆ ಮಾಡಿ ಎಂದು ತಿಳಿಸಿದೆ.